ಸಾಂದರ್ಭಿಕ ಚಿತ್ರ 
ದೇಶ

70 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಕರಣ: ವಾರ್ಡನ್ ವಿರುದ್ಧ ಎಫ್ಐಆರ್ ದಾಖಲು

ಹಾಸ್ಟೆಲ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ವಿರುದ್ದ ಎಫ್ಐಆರ್ ದಾಖಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...

ಮುಜಾಫರ್'ನಗರ: ಹಾಸ್ಟೆಲ್ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ವಿರುದ್ದ ಎಫ್ಐಆರ್ ದಾಖಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 
ಮುಜಾಫರ್'ನಗರದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ಸ್ನಾನದ ಕೋಣೆಯ ಗೋಡೆಗಳ ಮೇಲೆ ಕೆಲ ದಿನಗಳ ಹಿಂದೆ ರಕ್ತದ ಕಲೆಗಳು ಆಗಿದ್ದವು. ಇದನ್ನು ಕಂಡ ವಾರ್ಡನ್ ತೀವ್ರ ಕೆಂಡಾಮಂಡಲಗೊಂಡಿದ್ದಾಲೆ.  ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದಾಗ ವಿದ್ಯಾರ್ಥಿನಿಯರು ಬಾಯಿ ಬಿಟ್ಟಿಲ್ಲ. ಹೀಗಾಗಿ ಋತುಸ್ರಾವಕ್ಕೊಳಗಾದ ಬಾಲಕಿ ಯಾರು ಎಂಬುದನ್ನು ಪತ್ತೆ ಹಚ್ಚಲು ಹಾಸ್ಟೆಲ್ ನಲ್ಲಿದ್ದ ಎಲ್ಲಾ 70 ಬಾಲಕಿಯರ ಬಟ್ಟೆ ಬಿಟ್ಟಿಸಿ ತಪಾಸಣೆ ಮಾಡಿದ್ದಾಳೆ. ಅಲ್ಲದೆ ಬಾಲಕಿಯರಿಗೆ ಹೊಡೆದಿದ್ದಾಳೆ. ವಾರ್ಡನ್ ವರ್ತನೆಗೆ ಕೆಲ ಬಾಲಕಿಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಾಲಕಿಯರಿಗೆ ಬಟ್ಟೆಯನ್ನೂ ಕೊಡದ ವಾರ್ಡನ್ ಗಂಟೆಗಟ್ಟಲೆ ಕೊಠಡಿಯೊಳಗೆ ಕೂಡಿ ಹಾಕಿದ್ದಾಳೆ. 
ಘಟನೆ ಬಗ್ಗೆ ವಿದ್ಯಾರ್ಥಿನಿಯರು ಮೇಲ್ವಿಚಾರಕರ ಬಳಿ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ವಾರ್ಡನ್ ನಡೆಸಿದ ಈ ಹೇಯ ಘಟನೆ ಕುರಿತು ಎಲ್ಲೆಡೆ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಈ ಹಿನ್ನಲೆಯಲ್ಲಿ ಮಹಿಳಾ ವಾರ್ಡನ್ ನ್ನು ಹಾಸ್ಟೆಲ್ ನಿಂದ ಅಮಾನತು ಮಾಡಲಾಗಿತ್ತು. 
ಪ್ರಕರಣಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದ ಉತ್ತರಪ್ರದೇಶ ಸಚಿವ ಶ್ರೀಕಾಂತ್ ಶರ್ಮಾ ಅವರು ಸಂಬಂಧಪಟ್ಟಂತಹ ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಇದೀಗ ವಾರ್ಡನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT