ನ್ಯಾಯಾಧೀಶ ಕರ್ಣನ್ 
ದೇಶ

ಆದೇಶದಿಂದ 'ದಲಿತ ನ್ಯಾಯಾಧೀಶನಿಗೆ ಅವಮಾನ': ಸುಪ್ರೀಂ ಆದೇಶ ತಿರಸ್ಕರಿಸಿದ ನ್ಯಾ. ಕರ್ಣನ್

ವೈದ್ಯಕೀಯ ಪರೀಕ್ಷೆಗೊಳಪಡಿಸುವಂತೆ ನೀಡಲಾಗಿರುವ ಆದೇಶ ದಲಿತ ನ್ಯಾಯಾಧೀಶರೊಬ್ಬರಿಗೆ ಅವಮಾನ ಮಾಡಿದಂತಾಗಿದೆ ಎಂದು ನ್ಯಾಯಾಧೀಶ ಕರ್ಣನ್ ಅವರು ಸುಪ್ರೀಂಕೋರ್ಟ್ ವಿರುದ್ಧ ಕಿಡಿಕಾರಿದ್ದಾರೆ...

ನವದೆಹಲಿ: ವೈದ್ಯಕೀಯ ಪರೀಕ್ಷೆಗೊಳಪಡಿಸುವಂತೆ ನೀಡಲಾಗಿರುವ ಆದೇಶ ದಲಿತ ನ್ಯಾಯಾಧೀಶರೊಬ್ಬರಿಗೆ ಅವಮಾನ ಮಾಡಿದಂತಾಗಿದೆ ಎಂದು ನ್ಯಾಯಾಧೀಶ ಕರ್ಣನ್ ಅವರು ಸುಪ್ರೀಂಕೋರ್ಟ್ ವಿರುದ್ಧ ಕಿಡಿಕಾರಿದ್ದಾರೆ. 
ಮೇ.4 ರಂದು ವೈದ್ಯಕೀಯ ಪರೀಕ್ಷೆಗೊಳಪಡಿಸುವಂತೆ ಸುಪ್ರೀಂಕೋರ್ಟ್ ನ ಸಪ್ತಸದಸ್ಯ ಪೀಠದ ಆದೇಶ ಹಾಸ್ಯಾಸ್ಪದ ಹಾಗೂ ಅಪರೂಪವಾಗಿದೆ ಎಂದು ಕರ್ಣನ್ ಕಿಡಿಕಾರಿದ್ದಾರೆ. 
ನಾನೇನು ಮಾನಸಿಕ ಅಸ್ವಸ್ಥನೇ? ನನ್ನ ಮಾನಸಿಕ ಆನಾರೋಗ್ಯ ಅಳೆಯಲು ಸುಪ್ರೀಂಕೋರ್ಟ್ ಯಾರು? ನಾನು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದಿಲ್ಲ ಎಂದು ಕಣ್ನ್ ಸುಪ್ರೀಂ ವಿರುದ್ಧ ಗುಡುಗಿದ್ದಾರೆ. 
ನಾನೊಬ್ಬ ದಲಿತ ಎಂಬ ಕಾರಣಕ್ಕೆ ನನ್ನನ್ನು ಗುರಿ ಮಾಡಲಾಗಿದೆ. ನನ್ನ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎಳು ನ್ಯಾಯಾಧೀಶರು ಭ್ರಷ್ಟರು. ಒಂದು ವೇಳೆ, ಪಶ್ಚಿಮ ಬಂಗಾಳ ಡಿಜಿಪಿ ನನ್ನ ಒಪ್ಪಿಗೆ ಪಡೆಯದೇ ಏನಾದರೂ ನಡೆದುಕೊಂಡಿದ್ದೇ ಆದರೆ, ಅವರ ವಿರುದ್ಧ ಆದೇಶ ಹೊರಡಿಸುತ್ತೇನೆಂದು ಹೇಳಿದ್ದಾರೆ. 
ಇದೇ ವೇಳೆ ಸುಪ್ರೀಂಕೋರ್ಟ್ ನ ಎಲ್ಲಾ 7 ನ್ಯಾಯಾಧೀಶರನ್ನೂ ದೆಹಲಿಯ ಏಮ್ಸ್ ಆಸ್ಪತ್ರೆಯ ಮಾನಸಿಕ ವಿಭಾಗದಲ್ಲಿ ತಪಾಸಣೆಗೆ ಒಳಪಡಿಸಬೇಕು ಎಂದು ನಾನು ದೆಹಲಿ ಡಿಜಿಪಿ ಅವರಿಗೆ ಆದೇಶಿಸುತ್ತೇನೆ. ಮೇ.7ರೊಳಗಾಗಿ ಈ ಬಗ್ಗೆ ನನಗೆ ಅವರು ವರದಿ ಸಲ್ಲಿಸಬೇಕು ಎಂದು ಕರ್ಣನ್ ಅವರು ಹೊರಡಸಿದ ಆದೇಶವನ್ನು ಮಾಧ್ಯಮ ಕಚೇರಿಗಳಿಗೆ ತಲುಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT