ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ 
ದೇಶ

ಯೋಧರು, ಗಡಿ ರಕ್ಷಿಸುವಲ್ಲಿ ಬಿಜೆಪಿ ಅಸಮರ್ಥ: ಕಾಂಗ್ರೆಸ್

ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಸೇನೆಗೆ ಮುಕ್ತ ಹಸ್ತವನ್ನು ನೀಡಬೇಕೆಂಬ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಹೇಳಿಕೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದು, ಭಾರತೀಯ ಯೋಧರು ಹಾಗೂ ಗಡಿ ರಕ್ಷಿಸುವಲ್ಲಿ ಬಿಜೆಪಿ ಅಸಮರ್ಥವಾಗಿದೆ ಎಂದು...

ನವದೆಹಲಿ: ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಸೇನೆಗೆ ಮುಕ್ತ ಹಸ್ತವನ್ನು ನೀಡಬೇಕೆಂಬ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಹೇಳಿಕೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದು, ಭಾರತೀಯ ಯೋಧರು ಹಾಗೂ ಗಡಿ ರಕ್ಷಿಸುವಲ್ಲಿ ಬಿಜೆಪಿ ಅಸಮರ್ಥವಾಗಿದೆ ಎಂದು ಬುಧವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿಯವರು, ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷಗಳನ್ನೂ ಕೂಡ ಪೂರೈಸಿಲ್ಲ ಆಗಲೇ ದೇಶದಲ್ಲಿ ಮೂರು ದುರಾದೃಷ್ಟಕರ ಘಟನೆಗಳು ನಡೆದಿವೆ. ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಗಡಿಯನ್ನು ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಯೋಧರ ಮೃತದೇಹಗಳನ್ನೂ ರಕ್ಷಣೆ ಮಾಡುತ್ತಿಲ್ಲ. ದೇಶದ ಕುರಿತು ಬಿಜೆಪಿ ಎಷ್ಟರ ಮಟ್ಟಿಗೆ ಗಂಭೀರತೆಯನ್ನು ತೋರಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ. 
ನಂತರ ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿಯವರ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಯುಪಿಎ ಅಧಿಕಾರದ ಅವಧಿಯಲ್ಲಿ ಕೇವಲ ಒಂದು ಬಾರಿಯಷ್ಟೇ ಈ ರೀತಿ ಘಟನೆ ನಡೆದಿತ್ತು. ನಂತರ ಸರ್ಕಾರ ಕಠಿಣ ಕ್ರಮಕೈಗೊಂಡಿತ್ತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT