ಹಿಂದೂ ಯುವ ವಾಹಿನಿ 
ದೇಶ

ಮುಸ್ಲಿಂ ವ್ಯಕ್ತಿ ಹತ್ಯೆ; 6 ಹಿಂದೂ ಯುವ ವಾಹಿನಿ ಸದಸ್ಯರ ವಿರುದ್ಧ ಎಫ್ಐಆರ್

ಮುಸ್ಲಿಂ ಯುವಕನೊಂದಿಗೆ ಹಿಂದು ಯುವತಿ ಓಡಿಹೋಗಲು ಸಹಾಯ ಮಾಡಿದ್ದ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ...

ಬುಲಂದಶಹಾರ್(ಉತ್ತರಪ್ರದೇಶ): ಮುಸ್ಲಿಂ ಯುವಕನೊಂದಿಗೆ ಹಿಂದು ಯುವತಿ ಓಡಿಹೋಗಲು ಸಹಾಯ ಮಾಡಿದ್ದ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಆರು ಹಿಂದು ಯುವ ವಾಹಿನಿ ಸದಸ್ಯರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 
ಕಳೆದ ವಾರ 22 ವರ್ಷದ ಯೂಸಫ್ ಎಂಬಾತ ಹಿಂದು ಯುವತಿಯೊಂದಿಗೆ ಪರಾರಿಯಾಗಿದ್ದು ಇದಕ್ಕೆ ನೆರವು ನೀಡಿದ್ದಾರೆ ಎಂದು ಭಾವಿಸಿ 59 ವರ್ಷದ ಗುಲಾಂ ಮೊಹಮ್ಮದ್ ಎಂಬುವರನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಗುಲಾಂ ಪುತ್ರ ತಮ್ಮ ತಂದೆಯ ಹತ್ಯೆ ಹಿಂದೆ ಹಿಂದು ಯುವ ವಾಹಿನಿ ಸದಸ್ಯರ ಕೈವಾಡವಿದೆ ಎಂದು ಆರೋಪಿಸಿ ದೂರು ನೀಡಿದ್ದ. 
ಗುಲಾಂ ಮೊಹಮ್ಮದ್ ಕೊಲೆ ಪ್ರಕರಣ ಸಂಬಂಧ ಸದ್ಯ ಆರು ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮನ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. 
ವರದಿ ಪ್ರಕಾರ ಮುಸ್ಲಿಂ ಯುವಕನ ಜತೆ ಓಡಿಹೋಗಿರುವ ಯುವತಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತನ ಪುತ್ರಿ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT