ಹಿಂದೂ ಯುವ ವಾಹಿನಿ 
ದೇಶ

ಮುಸ್ಲಿಂ ವ್ಯಕ್ತಿ ಹತ್ಯೆ; 6 ಹಿಂದೂ ಯುವ ವಾಹಿನಿ ಸದಸ್ಯರ ವಿರುದ್ಧ ಎಫ್ಐಆರ್

ಮುಸ್ಲಿಂ ಯುವಕನೊಂದಿಗೆ ಹಿಂದು ಯುವತಿ ಓಡಿಹೋಗಲು ಸಹಾಯ ಮಾಡಿದ್ದ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ...

ಬುಲಂದಶಹಾರ್(ಉತ್ತರಪ್ರದೇಶ): ಮುಸ್ಲಿಂ ಯುವಕನೊಂದಿಗೆ ಹಿಂದು ಯುವತಿ ಓಡಿಹೋಗಲು ಸಹಾಯ ಮಾಡಿದ್ದ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಆರು ಹಿಂದು ಯುವ ವಾಹಿನಿ ಸದಸ್ಯರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 
ಕಳೆದ ವಾರ 22 ವರ್ಷದ ಯೂಸಫ್ ಎಂಬಾತ ಹಿಂದು ಯುವತಿಯೊಂದಿಗೆ ಪರಾರಿಯಾಗಿದ್ದು ಇದಕ್ಕೆ ನೆರವು ನೀಡಿದ್ದಾರೆ ಎಂದು ಭಾವಿಸಿ 59 ವರ್ಷದ ಗುಲಾಂ ಮೊಹಮ್ಮದ್ ಎಂಬುವರನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಗುಲಾಂ ಪುತ್ರ ತಮ್ಮ ತಂದೆಯ ಹತ್ಯೆ ಹಿಂದೆ ಹಿಂದು ಯುವ ವಾಹಿನಿ ಸದಸ್ಯರ ಕೈವಾಡವಿದೆ ಎಂದು ಆರೋಪಿಸಿ ದೂರು ನೀಡಿದ್ದ. 
ಗುಲಾಂ ಮೊಹಮ್ಮದ್ ಕೊಲೆ ಪ್ರಕರಣ ಸಂಬಂಧ ಸದ್ಯ ಆರು ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮನ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. 
ವರದಿ ಪ್ರಕಾರ ಮುಸ್ಲಿಂ ಯುವಕನ ಜತೆ ಓಡಿಹೋಗಿರುವ ಯುವತಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತನ ಪುತ್ರಿ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT