ಬಿಲ್ಕಿಸ್ ಬನೊ 
ದೇಶ

ಬಿಲ್ಕಿಸ್ ಬನೊ ಕೇಸ್: 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಖಾಯಂ: ಮರಣ ದಂಡನೆ ಕೋರಿದ್ದ ಸಿಬಿಐ ಅರ್ಜಿ ವಜಾ

ಗುಜರಾತ್ ನಲ್ಲಿ ನಡೆದಿದ್ದ ಬಿಲ್ಕಿಸ್ ಬನೋ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಬಾಂಬೆ ಹೈಕೋರ್ಟ್ 11 ಅಪರಾಧಿಗಳ ಜೀವಾವಧಿ ಶಿಕ್ಷೆಯ ತೀರ್ಪನ್ನು ...

ಮುಂಬಯಿ: 2002ರ ಮಾರ್ಚ್ ತಿಂಗಳಿನಲ್ಲಿ  ಗುಜರಾತ್ ನಲ್ಲಿ ನಡೆದಿದ್ದ  ಬಿಲ್ಕಿಸ್ ಬನೋ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಬಾಂಬೆ ಹೈಕೋರ್ಟ್ 11 ಅಪರಾಧಿಗಳ ಜೀವಾವಧಿ ಶಿಕ್ಷೆ ತೀರ್ಪನ್ನು ಎತ್ತಿ ಹಿಡಿದಿದೆ. ಮರಣ ದಂಡನೆ ಕೋರಿದ್ದ ಸಿಬಿಐ ಅರ್ಜಿಯನ್ನು ವಜಾಗೊಳಿಸಿದೆ.
ಇದೇ ಕೇಸಿಗೆ ಸಂಬಂಧಿಸಿದಂತೆ ಐವರು ಪೋಲೀಸರನ್ನು ಖುಲಾಸೆಗೊಳಿಸಿದ್ದ ಆದೇಶವನ್ನು ತಡೆ ಹಿಡಿದಿರುವ ನ್ಯಾಯಾಲಯ, ಅವರ ವಿರುದ್ಧ ತನಿಖೆ ನಡೆಸುವಂತೆ ಸಿಬಿಐ ಗೆ ಆದೇಶಿಸಿದೆ. 11 ಅಪರಾಧಿಗಳ ಪೈಕಿ ಮೂವರಿಗೆ  ಗಲ್ಲು ಶಿಕ್ಷೆ ವಿಧಿಸುವಂತೆ ಸಿಬಿಐ ಬಾಂಬೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಪ್ರಕರಣದ ಹಿನ್ನೆಲೆ: 2002ರ ಗುಜರಾತ್ ದೊಂಬಿಯಲ್ಲಿ  19 ವರ್ಷದ  5 ತಿಂಗಳ ಗರ್ಭಿಣಿ ಬಿಲ್ಕಿಸ್ ಬನೋ ಮತ್ತು ಆಕೆಯ ಸಹೋದರಿ ಮತ್ತು ತಾಯಿಯಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಜೊತೆಗೆ ಆಕೆಯ ಕುಟುಂಬದ 14 ಮಂದಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು, ಇದರಲ್ಲಿ ಬಿಲ್ಕಿಸ್ ಬನೋ ಮೂರು ವರ್ಷದ ಮಗಳನ್ನು ಹತ್ಯೆ ಮಾಡಲಾಗಿತ್ತು.
ಇದೊಂದು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದ್ದು, 11 ಅಪರಾಧಿಗಳಲ್ಲಿ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಮುಂಬಯಿ ವಿಚಾರಣಾ ನ್ಯಾಯಾಲಯಕ್ಕೆ ಸಿಬಿಐ ಮನವಿ ಸಲ್ಲಿಸಿತ್ತು, ಆದರೆ ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಬಾಂಬೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿದೆ.
ಸೆಂಟ್ರಲ್ ಗುಜರಾತ್ ನಲ್ಲಿ ನೆಲೆಸಿದ್ದ ಬಿಲ್ಕಿಸ್ ಬನೋ ಮತ್ತು ಆಕೆಯ ಪತಿ ಅತ್ಯಾಚಾರಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದರು. ಈ ಸಂಬಂಧ ಗುಜರಾತ್ ನಲ್ಲಿ ಕೇಸು ದಾಖಲಿಸಲಾಗಿತ್ತು, ಆದರೆ ಅಲ್ಲಿ ವಿಚಾರಣೆ ನಡೆದರೇ ಸಾಕ್ಷ್ಯಗಳು ನಾಶವಾಗುವ ಸಾಧ್ಯತೆಯಿದೆ ಎಂಬ ಶಂಕೆಯ ಮೇಲೆ ಪ್ರಕರಣವನ್ನು ಗುಜರಾತ್ ನಿಂದ ಮುಂಬಯಿಗೆ ವರ್ಗಾಯಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT