ಸಾಂದರ್ಭಿಕ ಚಿತ್ರ 
ದೇಶ

ಹಣ ಅಕ್ರಮ ವರ್ಗಾವಣೆ: ಝೂಮ್ ಡೆವೆಲಪರ್ ವಿಜಯ್ ಚೌಧರಿ ಬಂಧನ

ಮುಂಬೈ ಮೂಲದ ಕಂಪೆನಿಯ ಪ್ರಚಾರಕ ಮತ್ತು ನಿರ್ದೇಶಕರನ್ನು ಜಾರಿ ನಿರ್ದೇಶನಾಲಯ...

ನವದೆಹಲಿ: ಮುಂಬೈ ಮೂಲದ ಕಂಪೆನಿಯ ಪ್ರಚಾರಕ ಮತ್ತು ನಿರ್ದೇಶಕರನ್ನು ಜಾರಿ ನಿರ್ದೇಶನಾಲಯ 2,600 ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದೆ.
ದೇಶದಲ್ಲಿ ಬ್ಯಾಂಕ್ ಹಣ ವಂಚನೆಗೆ ಸಂಬಂಧಪಟ್ಟಂತೆ ತನಿಖಾ ಸಂಸ್ಥೆಗಳು ನಡೆಸಿದ ಅತಿ ದೊಡ್ಡ ಪ್ರಕರಣ ಎನ್ನಲಾಗಿದೆ. ತನಿಖಾಧಿಕಾರಿಗಳು ವಿಜಯ್ ಎಂ.ಚೌಧರಿ ಎಂಬುವವರನ್ನು ನಿನ್ನೆ ತಡರಾತ್ರಿ ಮುಂಬೈಯಲ್ಲಿ ಬಂಧಿಸಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ)ಯಡಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಂಎಸ್ ಝೂಮ್ ಡೆವೆಲಪರ್ಸ್ ಪ್ರೈ.ಲಿಮಿಟೆಡ್ ನ ಮುಖ್ಯ ನಿಯಂತ್ರಕ ಚೌಧರಿ ಅವರಾಗಿದ್ದು ಈ ಕೇಸಿನಲ್ಲಿ ಜಾರಿ ನಿರ್ದೇಶನಾಲಯಕ್ಕೆ ಬೇಕಾದವರಾಗಿದ್ದಾರೆ. ಕಂಪೆನಿ ಮತ್ತು ಅದರ ನಿಯಂತ್ರಕರು 25 ಬ್ಯಾಂಕುಗಳಿಂದ 2,650 ಕೋಟಿ ರೂಪಾಯಿ ವಂಚಿಸಿದ್ದಾರೆ.
ಚೌಧರಿಯವರನ್ನು ಇಂದು ಇಂದೋರ್ ನ್ಯಾಯಾಲಯದ ಮುಂದೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸುವ ನಿರೀಕ್ಷೆಯಿದೆ.
ಸಿಬಿಐ ಎಫ್ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಕೇಸು ದಾಖಲಿಸಿದೆ. ತನ್ನ ಅಥವಾ ತನ್ನ ಸಹವರ್ತಿಗಳ ಹೆಸರಿನಲ್ಲಿ ಚೌಧರಿ 485 ಕಂಪೆನಿಗಳನ್ನು ವಂಚಿಸಿದ್ದಾರೆ ಎಂದು ನಿರ್ದೇಶನಾಲಯ ಹೇಳಿದೆ. ಇದುವರೆಗೆ ಜಾರಿ ನಿರ್ದೇಶನಾಲಯ 130 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಸೇರಿಸಿದೆ. ಝೂಮ್ ಡೆವೆಲಪರ್ಸ್ ಇಂದೋರ್ ಮತ್ತು ಮುಂಬೈಯಲ್ಲಿ ಕಾರ್ಯನಿರ್ವಹಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT