ಸುಪ್ರೀಂ ಕೋರ್ಟ್ 
ದೇಶ

ಗಾಯತ್ರಿ ಪ್ರಜಾಪತಿ ಅತ್ಯಾಚಾರ ಕೇಸು: ಇಬ್ಬರು ಸಹ ಆರೋಪಿಗಳಿಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶ

ಗಾಯತ್ರಿ ಪ್ರಜಾಪತಿ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಇನ್ನೆರಡು ದಿನಗಳೊಳಗೆ...

ನವದೆಹಲಿ: ಗಾಯತ್ರಿ ಪ್ರಜಾಪತಿ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಇನ್ನೆರಡು ದಿನಗಳೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ವಿಕಾಸ್ ವರ್ಮ ಮತ್ತು ಅಮರಿಂದರ್ ಸಿಂಗ್ ಗೆ ಸೂಚಿಸಿದ್ದಾರೆ.

ಪ್ರಜಾಪತಿ ಮತ್ತು ಇಬ್ಬರು ಆರೋಪಿಗಳಿಗೆ ತ್ವರಿತ ನ್ಯಾಯಾಲಯ ಈ ಮುನ್ನ ಜಾಮೀನು ನೀಡಿತ್ತು. ಆದರೂ ಅಲಹಾಬಾದ್ ಹೈಕೋರ್ಟ್ ಅವರ ಜಾಮೀನು ಆದೇಶವನ್ನು ವಜಾ ಮಾಡಿತ್ತು. ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯಿಂದ ಲಕ್ನೋದ ಆಶಿಯಾನಾ ಪ್ರದೇಶದಲ್ಲಿ ಗಾಯತ್ರಿ ಪ್ರಜಾಪತಿ ಮಾರ್ಚ್ 15ರಂದು ಬಂಧಿತರಾಗಿದ್ದರು. 

ಬಾಲಕಿಯ ತಾಯಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿದ್ದ ಸಮಾಜವಾದಿ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಪ್ರಜಾಪತಿ ಸುಮಾರು ಒಂದು ತಿಂಗಳ ಕಾಲ ತನ್ನ ಬಂಧನವನ್ನು ತಪ್ಪಿಸಿಕೊಂಡದ್ದರು. 

ಕಳೆದ ಫೆಬ್ರವರಿಯಲ್ಲಿ ಪ್ರಜಾಪತಿ ಮತ್ತು 6 ಮಂದಿ ವಿರುದ್ಧ ಸುಪ್ರೀಂ ಕೋರ್ಟ್ ಆದೇಶದಂತೆ ಪೊಲೀಸ್ ದೂರು ನೀಡಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಈ ಏಳೂ ಜನರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT