ಸಾಂದರ್ಭಿಕ ಚಿತ್ರ 
ದೇಶ

ಆಧಾರ್-ಪ್ಯಾನ್ ಸಂಖ್ಯೆ ಸಂಪರ್ಕ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪ್ಯಾನ್ ಸಂಖ್ಯೆ ಮತ್ತು ತೆರಿಗೆ ಸಲ್ಲಿಕೆಗೆ ಆಧಾರ್ ಕಡ್ಡಾಯಗೊಳಿಸಬೇಕೆ ಬೇಡವೆ ಎಂಬ ಬಗ್ಗೆ...

ನವದೆಹಲಿ: ಪ್ಯಾನ್ ಸಂಖ್ಯೆ ಮತ್ತು ತೆರಿಗೆ ಸಲ್ಲಿಕೆಗೆ ಆಧಾರ್ ಕಡ್ಡಾಯಗೊಳಿಸಬೇಕೆ ಬೇಡವೆ ಎಂಬ ಬಗ್ಗೆ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.
ನ್ಯಾಯಮೂರ್ತಿಗಳಾದ ಅರ್ಜನ್ ಕುಮಾರ್ ಸಿಕ್ರಿ ಮತ್ತು ಅಶೋಕ್ ಭೂಶಣ್ ಅವರನ್ನೊಳಗೊಂಡ ನ್ಯಾಯಪೀಠ, ಎಲ್ಲಾ ಸಂಬಂಧಪಟ್ಟ ಪಕ್ಷಗಳಿಗೆ ತಮ್ಮ ಸಂಬಂಧಿಸಿದ ಲಿಖಿತ ಸಲ್ಲಿಕೆಗಳನ್ನು ಮುಂದಿನ ಮಂಗಳವಾರದೊಳಗೆ ಸಲ್ಲಿಸುವಂತೆ ತಿಳಿಸಿದೆ.
ಅಟೊರ್ನಿ ಜನರಲ್ ಮುಕುಲ್ ರೊಹಟ್ಗಿ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿ ಆಧಾರ್ ಸಂಖ್ಯೆ ವಿಶಿಷ್ಟವಾಗಿದ್ದು ಅದನ್ನು ನಕಲು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅನೇಕ ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾದ ವಕೀಲರು, ವ್ಯವಸ್ಥೆ ಪೂರ್ಣವಾಗಿ ಪುರಾವೆಯಿಲ್ಲದಾಗಿದ್ದು, ನಕಲು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಪ್ಯಾನ್ ಕಾರ್ಡಿಗೆ ಮತ್ತು ತೆರಿಗೆ ಪಾವತಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರೊಹಟ್ಗಿ ಬೆಂಬಲಿಸಿದ್ದರು. ದೇಶಾದ್ಯಂತ ನಕಲಿ ಪ್ಯಾನ್ ಕಾರ್ಡುಗಳ ಬಳಕೆಯನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳುವುದು ಸ್ವಾಗತಾರ್ಹ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT