ಸಾಂದರ್ಭಿಕ ಚಿತ್ರ 
ದೇಶ

ಜಮ್ಮು: ಹಿಮಪಾತಕ್ಕೆ ಸಿಕ್ಕಿದ ಮಿನಿ ಬಸ್ಸು; ಐವರು ಸಾವು

ಜಮ್ಮು-ಕಾಶ್ಮೀರದ ದೊಡಾ ಜಿಲ್ಲೆಯ ಬ್ಹಡೆರ್ವಾಹ್-ಬಶೊಲಿ ಹೆದ್ದಾರಿಯಲ್ಲಿ ಭಾರೀ ಹಿಮಪಾತಕ್ಕೆ ಮಿನಿ ಬಸ್ಸು...

ಬಡೆರ್ವಾಹ್: ಜಮ್ಮು-ಕಾಶ್ಮೀರದ ದೊಡಾ ಜಿಲ್ಲೆಯ ಬ್ಹಡೆರ್ವಾಹ್-ಬಶೊಲಿ ಹೆದ್ದಾರಿಯಲ್ಲಿ ಭಾರೀ ಹಿಮಪಾತಕ್ಕೆ ಬಸ್ಸು ಸಿಕ್ಕಿಹಾಕಿಕೊಂಡ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟು ಅನೇಕ ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ.
ಬನಿಯಿಂದ ಬಡೆರ್ವಾಹ್ ಗೆ ತೆರಳುತ್ತಿದ್ದ ಮಿನಿ ಬಸ್ಸು ಹಿಮಪಾತಕ್ಕೆ ಸಿಕ್ಕಿ 1500 ಅಡಿ ಪ್ರಪಾತದ ಕಂದಕಕ್ಕೆ ಉರುಳಿ ಹೋಗಿ ಬಿತ್ತು ಎಂದು ಹಿಮ ಮತ್ತು ಮೃತದೇಹಗಳನ್ನು ಹೊರತೆಗೆಯುವ ಕೆಲಸಗಾರರು ವಿವರಿಸಿದ್ದಾರೆ. ಬಡೆರ್ವಾಹ್ ನಿಂದ 38 ಕಿಲೋ ಮೀಟರ್ ದೂರದಲ್ಲಿ ಚತ್ತರ್ ಗಾಲಿ ಪಾಸ್ ನಲ್ಲಿ ಈ ಘಟನೆ ನಡೆದಿದೆ.
ಬಸ್ಸಿನಲ್ಲಿ 12 ಮಂದಿ ಪ್ರಯಾಣಿಕರಿದ್ದರು. ಕಾರ್ಮಿಕರು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ಆರಂಭಿಸಿದ್ದು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಎಂದು ಬ್ಹಡೆರ್ವಾಹ್ ನ ಎಸ್ ಡಿಪಿಒ ಬಿರ್ಜೇಶ್ ಶರ್ಮ ತಿಳಿಸಿದ್ದಾರೆ.
ಇದುವರೆಗೆ ಬಸ್ಸಿನ ಚಾಲಕ ಸೇರಿದಂತೆ ಮೂವರು ಗಾಯಗೊಂಡವರನ್ನು ರಕ್ಷಿಸಲಾಗಿದ್ದು ಬ್ಹಡೆರ್ವಾಹ್ ನ ಉಪ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿಮಪಾತದಿಂದ 5 ಶವಗಳನ್ನು ಹೊರತೆಗೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT