ಸಾಂದರ್ಭಿಕ ಚಿತ್ರ 
ದೇಶ

ಜಮ್ಮು: ಹಿಮಪಾತಕ್ಕೆ ಸಿಕ್ಕಿದ ಮಿನಿ ಬಸ್ಸು; ಐವರು ಸಾವು

ಜಮ್ಮು-ಕಾಶ್ಮೀರದ ದೊಡಾ ಜಿಲ್ಲೆಯ ಬ್ಹಡೆರ್ವಾಹ್-ಬಶೊಲಿ ಹೆದ್ದಾರಿಯಲ್ಲಿ ಭಾರೀ ಹಿಮಪಾತಕ್ಕೆ ಮಿನಿ ಬಸ್ಸು...

ಬಡೆರ್ವಾಹ್: ಜಮ್ಮು-ಕಾಶ್ಮೀರದ ದೊಡಾ ಜಿಲ್ಲೆಯ ಬ್ಹಡೆರ್ವಾಹ್-ಬಶೊಲಿ ಹೆದ್ದಾರಿಯಲ್ಲಿ ಭಾರೀ ಹಿಮಪಾತಕ್ಕೆ ಬಸ್ಸು ಸಿಕ್ಕಿಹಾಕಿಕೊಂಡ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟು ಅನೇಕ ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ.
ಬನಿಯಿಂದ ಬಡೆರ್ವಾಹ್ ಗೆ ತೆರಳುತ್ತಿದ್ದ ಮಿನಿ ಬಸ್ಸು ಹಿಮಪಾತಕ್ಕೆ ಸಿಕ್ಕಿ 1500 ಅಡಿ ಪ್ರಪಾತದ ಕಂದಕಕ್ಕೆ ಉರುಳಿ ಹೋಗಿ ಬಿತ್ತು ಎಂದು ಹಿಮ ಮತ್ತು ಮೃತದೇಹಗಳನ್ನು ಹೊರತೆಗೆಯುವ ಕೆಲಸಗಾರರು ವಿವರಿಸಿದ್ದಾರೆ. ಬಡೆರ್ವಾಹ್ ನಿಂದ 38 ಕಿಲೋ ಮೀಟರ್ ದೂರದಲ್ಲಿ ಚತ್ತರ್ ಗಾಲಿ ಪಾಸ್ ನಲ್ಲಿ ಈ ಘಟನೆ ನಡೆದಿದೆ.
ಬಸ್ಸಿನಲ್ಲಿ 12 ಮಂದಿ ಪ್ರಯಾಣಿಕರಿದ್ದರು. ಕಾರ್ಮಿಕರು ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ಆರಂಭಿಸಿದ್ದು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಎಂದು ಬ್ಹಡೆರ್ವಾಹ್ ನ ಎಸ್ ಡಿಪಿಒ ಬಿರ್ಜೇಶ್ ಶರ್ಮ ತಿಳಿಸಿದ್ದಾರೆ.
ಇದುವರೆಗೆ ಬಸ್ಸಿನ ಚಾಲಕ ಸೇರಿದಂತೆ ಮೂವರು ಗಾಯಗೊಂಡವರನ್ನು ರಕ್ಷಿಸಲಾಗಿದ್ದು ಬ್ಹಡೆರ್ವಾಹ್ ನ ಉಪ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿಮಪಾತದಿಂದ 5 ಶವಗಳನ್ನು ಹೊರತೆಗೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್