ದೇಶ

ನಿರ್ಭಯಾ ಗ್ಯಾಂಗ್ ರೇಪ್: ತಡವಾಗಿಯಾದರೂ ನ್ಯಾಯ ಸಿಕ್ಕಿದೆ- ಮನೇಕಾ ಗಾಂಧಿ

Sumana Upadhyaya
ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು  ಶಿಕ್ಷೆ ವಿಧಿಸಿದ ದೆಹಲಿ ಹೈಕೋರ್ಟ್ ನ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ  ಮನೇಕಾ ಗಾಂಧಿ, ತಡವಾಗಿಯಾದರೂ ನ್ಯಾಯ ಸಿಕ್ಕಿದೆ ಎಂದು ಸಮಾಧಾನ ವ್ಯಕ್ತಪಡಿಸಿದರು.
ಕೆಳ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದು ಖುಷಿ ತಂದಿದೆ. ತೀರ್ಪು ಬೇಗ ಪ್ರಕಟವಾಗಬೇಕಿತ್ತು. ಆದರೆ ಭಾರತದ ಕಾನೂನು ಪ್ರಕ್ರಿಯೆಯಲ್ಲಿ 5 ವರ್ಷ ಬಹಳ ದೀರ್ಘ ಸಮಯವೇನಲ್ಲ ಎಂದು ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದರು.
SCROLL FOR NEXT