ಪುಲ್ವಾಮ ಬ್ಯಾಂಕ್ ದರೋಡೆ ಪ್ರಕರಣ: ಉಗ್ರನ ಸುಳಿವಿಗೆ ರೂ.10 ಲಕ್ಷ ಬಹುಮಾನ ಘೋಷಣೆ 
ದೇಶ

ಪುಲ್ವಾಮ ಬ್ಯಾಂಕ್ ದರೋಡೆ ಪ್ರಕರಣ: ಉಗ್ರನ ಸುಳಿವಿಗೆ ರೂ.10 ಲಕ್ಷ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರನ ಕುರಿತು ಸುಳಿವು ನೀಡಿದವರಿಗೆ ರೂ.10 ಲಕ್ಷ ಬಹುಮಾನ ನೀಡುವುದಾಗಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರನ ಕುರಿತು ಸುಳಿವು ನೀಡಿದವರಿಗೆ ರೂ.10 ಲಕ್ಷ ಬಹುಮಾನ ನೀಡುವುದಾಗಿ ಅಧಿಕಾರಿಗಳು ಶುಕ್ರವಾರ ಘೋಷಣೆ ಮಾಡಿದ್ದಾರೆ. 
ಉಗ್ರನ ಕುರಿತಂತೆ ಪೋಸ್ಟರ್ ಗಳನ್ನು ಬೀದಿ ಬೀದಿಗಳಲ್ಲಿ ಅಂಟಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಉಗ್ರನ ಕುರಿತು ಮಾಹಿತಿ ನೀಡಿದವರಿಗೆ ರೂ.10 ಲಕ್ಷ ಇನಾಮು ನೀಡುವುದಾಗಿ ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಗ್ರಾಮೀಣ ಬ್ಯಾಂಕ್ ಘಟಕದ ಮೇಲೆ ದಾಳಿ ಮಾಡಿದ್ದ ಉಗ್ರರು, ರೂ.4.92 ಲಕ್ಷ ದರೋಡೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು. ಈ ಘಟನೆಯಾದ ಕೆಲವೇ ದಿನಗಳಲ್ಲಿ ಕಾಲ್ಗಾಂ ಬ್ಯಾಂಕ್ ವಾಹನವೊಂದರ ಮೇಲೆ ದಾಳಿ ಮಾಡಿದ್ದ ಉಗ್ರರು ಇಬ್ಬರು ಸಿಬ್ಬಂದಿಗಳು ಹಾಗೂ 5 ಮಂದಿ ಪೊಲೀಸನ್ನು ಹತ್ಯೆ ಮಾಡಿ ರೂ.50 ಲಕ್ಷ ಹಣವನ್ನು ದೋಚಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Amritsar: ಉಗ್ರರ ದಾಳಿ ಸಂಚು ವಿಫಲ; ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ; ರಾಕೆಟ್ ಚಾಲಿತ ಗ್ರೆನೇಡ್ ವಶಕ್ಕೆ!

ವ್ಲಾಡಿಮಿರ್ ಕ್ರಾಮ್ನಿಕ್ ವಂಚನೆ ಆರೋಪ: ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಆತ್ಮಹತ್ಯೆ; ನಿಹಾಲ್ ಸರಿನ್ ಆಕ್ರೋಶ!

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

India 'Proxy war': ಪಾಕಿಸ್ತಾನದ ಆರೋಪಕ್ಕೆ ಅಪ್ಘಾನಿಸ್ತಾನ ತಿರುಗೇಟು! ಹೇಳಿದ್ದೇನು? Video

SCROLL FOR NEXT