ಅಖಿಲೇಶ್ ಯಾದವ್ 
ದೇಶ

ರಾಷ್ಟ್ರಪತಿ ಚುನಾವಣೆಗೆ ಯಾವುದೇ ಜಾತ್ಯಾತೀತ ಮೈತ್ರಿಗೆ ಎಸ್ ಪಿ ಬೆಂಬಲ: ಅಖಿಲೇಶ್ ಯಾದವ್

ರಾಷ್ಟ್ರಪತಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಯಾವುದೇ ಜಾತ್ಯಾತೀತ ಮೈತ್ರಿಕೂಟಕ್ಕೆ ಬೆಂಬಲ ನೀಡಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

ಲಖನೌ: ರಾಷ್ಟ್ರಪತಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಯಾವುದೇ ಜಾತ್ಯಾತೀತ ಮೈತ್ರಿಕೂಟಕ್ಕೆ ಬೆಂಬಲ ನೀಡಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. 
ಎನ್ ಡಿಎ ಅಭ್ಯರ್ಥಿ ವಿರುದ್ಧ ಜಾತ್ಯಾತೀತ ಮೈತ್ರಿಕೂಟದ ಅಭ್ಯರ್ಥಿ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಾದರೆ ಮೈತ್ರಿಕೂಟವನ್ನು ಸಮಾಜವಾದಿ ಪಕ್ಷ ಬೆಂಬಲಿಸಲಿದೆ ಎಂದಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಗೆ ವಿರುದ್ಧವಾಗಿ ಮತ್ತೋರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿದೆ ಇದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾತ್ಯಾತೀತ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಸಿಪಿಐಎಂ ಮುಖಂಡ ಸೀತಾರಾಮ್ ಯೆಚೂರಿ ಅಭಿಪ್ರಾಯಪಟ್ಟಿದ್ದರು. ಈ ಬೆನ್ನಲ್ಲೇ ಲಾಲೂ ಪ್ರಸಾದ್ ಯಾದವ್ ಸಹ ರಾಷ್ಟ್ರಪತಿ ಚುನಾವಣೆಗೆ ಮಹಾಮೈತ್ರಿಯ ಅನಿರ್ವಾರ್ಯತೆ ಇದೆ ಎಂದಿದ್ದರು. 
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಹಲವು ಪಕ್ಷಗಳ ನಾಯಕರು ರಾಷ್ಟ್ರಪತಿ ಚುನಾವಣೆಗೆ ಮೈತ್ರಿಕೂಟ ರಚಿಸಿ ಬಿಜೆಪಿಗೆ ಪರ್ಯಾಯವಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಹೇಳಿದ್ದಾರೆ. ಈ ಬೆನ್ನಲ್ಲೇ ಉತ್ತರ ಪ್ರದೇಶ ಮಾಜಿ ಸಿಎಂ, ಎಸ್ ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಸಹ ಪ್ರತಿಕ್ರಿಯೆ ನೀಡಿದ್ದು, ಜಾತ್ಯಾತೀತ ಪಕ್ಷಗಳಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT