ಕಪಿಲ್ ಮಿಶ್ರಾ ಹಾಗೂ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ 
ದೇಶ

ದೆಹಲಿ: ಸಿಎಂ ಕೇಜ್ರಿವಾಲ್ ಸಂಪುಟದಿಂದ ಸಚಿವ ಕಪಿಲ್ ಮಿಶ್ರಾ ಹೊರಕ್ಕೆ

ಕುಮಾರ್ ವಿಶ್ವಾಸ್ ಅವರ ಜತೆಗೂಡಿ ಆಮ್ ಆದ್ಮಿ ಪಕ್ಷದ ನಾಯಕತ್ವದ ವಿರುದ್ಧವೇ ಸಡ್ಡು ಹೊಡೆದಿದ್ದ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾ...

ನವದೆಹಲಿ: ಕುಮಾರ್ ವಿಶ್ವಾಸ್ ಅವರ ಜತೆಗೂಡಿ ಆಮ್ ಆದ್ಮಿ ಪಕ್ಷದ ನಾಯಕತ್ವದ ವಿರುದ್ಧವೇ ಸಡ್ಡು ಹೊಡೆದಿದ್ದ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ. 
ಕಪಿಲ್ ಮಿಶ್ರಾ ಅವರನ್ನು ಕೈಬಿಟ್ಟಿರುವ ಬೆನ್ನಲ್ಲೇ ಸೀಮಪುರಿ ಶಾಸಕ ರಾಜೇಂದ್ರ ಪಾಲ್ ಗೌತಮ್ ಮತ್ತು ನಜಾಫ್'ಗಢದ ಶಾಸಕ ಕೈಲಾಶ್ ಗೆಹ್ಲೋಟ್ ಅವರು ನೂತನವಾಗಿ ಕೇಜ್ರಿವಾಲ್ ಅವರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. 
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಸಚಿವ ಮಿಶ್ರಾರನ್ನು ವಜಾ ಮಾಡಲಾಗಿದೆ. 
ಸಚಿವ ಮಿಶ್ರಾ ಹೆಚ್ಚುವರಿ ಮೌಲ್ಯದ ಬಿಲ್ ಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಮಂತ್ರಿ ಸ್ಥಾನದಿಂದ ವಜಾ ಮಾಡುತ್ತಿದ್ದಂತೆ ಕ್ರೋಧಗೊಂಡ ಆಪ್ ಶಾಸಕ ಮಿಶ್ರಾ, ಹಗರಣದಲ್ಲಿ ತೊಡಗಿದ ಕೆಲ ಆಮ್ ಆದ್ಮಿ ಪಕ್ಷದ ನಾಯಕರ ಬಣ್ಣ ಬಯಲು ಮಾಡುತ್ತೇನೆಂದು ಗುಡುಗಿದ್ದಾರೆ. 
ಭ್ರಷ್ಟಾಚಾರ ಆರೋಪವಿಲ್ಲದ, ಸಿಬಿಐ ವಿಚಾರಣೆ ಎದುರಿಸದ ಏಕೈಕ ಸಚಿವ ನಾನು. ನನಗೆ ಮಾಹಿತಿಯನ್ನೂ ನೀಡದೆ ನನ್ನನ್ನು ಸಂಪುಟದಿಂದ ಹೊರಹಾಕಲಾಗಿದೆ. ನನ್ನ ವಜಾ ಮಾಡಿರುವ ನಿರ್ಧಾರವನ್ನು ಕ್ಯಾಬಿನೆಟ್ ಅಥವಾ ರಾಜಕೀಯ ವ್ಯವಹಾರಗಳ ಸಮಿತಿ ಕೈಗೊಂಡಿರಲಾರದು. ಇದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಏಕಪಕ್ಷೀಯ ನಿರ್ಧಾರವಾಗಿದೆ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಕಪಿಲ್ ಮಿಶ್ರಾ ಅವರು ಹೇಳಿಕೊಂಡಿದ್ದಾರೆ. 
ಶುಕ್ರವಾರವಷ್ಟೇ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಹಗರಣದಲ್ಲಿ ಭಾಗಿಯಾದ ನಾಯಕರ ಕುರಿತ ದಾಖಲೆಗಳನ್ನು ನೀಡಿದ್ದೇನೆಂದು ಇದೇ ವೇಳೆ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT