ಪ್ರಧಾನಿ ನರೇಂದ್ರ ಮೋದಿ-ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ 
ದೇಶ

ಮನಮೋಹನ್ ಆಡಳಿತಾವಧಿಯಲ್ಲಿ ಕಾಶ್ಮೀರದಲ್ಲಿ ಸಹಜ ಸ್ಥಿತಿ, ಉತ್ತುಂಗದಲ್ಲಿ ಪ್ರವಾಸೋದ್ಯಮ: ಕಾಂಗ್ರೆಸ್

ಜಮ್ಮು-ಕಾಶ್ಮೀರದಲ್ಲಿ ಪ್ರಸ್ತುತ ಮತ್ತೆ ಭುಗಿಲೆದ್ದಿರುವ ಉದ್ವಿಗ್ನ ಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ...

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಪ್ರಸ್ತುತ ಮತ್ತೆ ಭುಗಿಲೆದ್ದಿರುವ ಉದ್ವಿಗ್ನ ಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸಿರುವ ಕಾಂಗ್ರೆಸ್, ಪಾಕಿಸ್ತಾನ ಜೊತೆಗಿನ ಭಾರತದ ಸಂಬಂಧ ಹದಗೆಡುತ್ತಿದೆ. ಹಿಂದಿನ ಮನಮೋಹನ್ ಸಿಂಗ್ ಸರ್ಕಾರದ ಆಡಳಿತದಲ್ಲಿ ಇಷ್ಟೊಂದು ಹಿಂಸಾಚಾರ, ಗಲಭೆ ಕಂಡಿರಲಿಲ್ಲ. ಪ್ರವಾಸೋದ್ಯಮ ಕೂಡ ಪ್ರವರ್ಧಮಾನ ಕಂಡಿತ್ತು ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳು ವಿಫಲವಾಗಿವೆ. ಪಾಕಿಸ್ತಾನ ಜೊತೆ ಸೌಹಾರ್ದ ಸುಧಾರಣೆಯಲ್ಲಿ ಅವರು ಯಾವುದೇ ಮಹತ್ವದ ನೀಲನಕ್ಷೆ ತಯಾರಿಸಿಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಕಾಶ್ಮೀರ ಕಣಿವೆ ಪರಿಸ್ಥಿತಿ ಸಹಜವಾಗಿತ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ ಹೇಳಿದ್ದಾರೆ.
ಅನಿಶ್ಚಿತತೆಯಿಂದಾಗಿ ಕಾಶ್ಮೀರದ ಪ್ರವಾಸೋದ್ಯಮದ ಮೇಲೆ ಕೂಡ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.
ಕಾಶ್ಮೀರದಲ್ಲಿ ಹಿಂಸೆಯನ್ನು ಹರಡಲು ಪ್ರತ್ಯೇಕತಾವಾದಿ ನಾಯಕರಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಹಣ ನೀಡುತ್ತಿದೆ ಎಂಬ ವರದಿಗಳ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಇಂತಹ ವಿಷಯಗಳು ಗಂಭೀರವಾಗಿದ್ದು ತನಿಖೆ ನಡೆಸುವ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ಟೊಮ್ ವಡಕ್ಕನ್ ಹೇಳಿದರು.
ಭಾರತದಲ್ಲಿ ಇತ್ತೀಚೆಗೆ ಇಬ್ಬರು ಐಎಸ್ಐ ಏಜೆಂಟರ್ ಬಂಧಿತರಾದ ನಂತರ ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನ ಐಎಸ್ಐಯಿಂದ ಸುಮಾರು 70 ಲಕ್ಷ ಹಣ ಕಳೆದ ಹಲವು ತಿಂಗಳು ಬಂದಿದೆ ಎಂದು ಇತ್ತೀಚೆಗೆ ವರದಿಯೊಂದು ಪ್ರಕಟವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT