ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ 
ದೇಶ

ಮುಂಗಾರು ವೈಫಲ್ಯದ ಸಾಧ್ಯತೆಯನ್ನು ಎದುರಿಸಲು ಸಜ್ಜಾಗಿ: ರಾಜ್ಯಗಳಿಗೆ ಕೇಂದ್ರ ಕೃಷಿ ಸಚಿವರ ಪತ್ರ

ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮ....

ನವದೆಹಲಿ: ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಸುವಂತೆ ಕೇಂದ್ರ ಕೃಷಿ ಖಾತೆ ಸಚಿವ ರಾಧಾ ಮೋಹನ್ ಸಿಂಗ್ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಶೇಕಡಾ 25ರಷ್ಟು ಹಣವನ್ನು ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತದೆ. ಇದನ್ನು ನೈಸರ್ಗಿಕ ವಿಕೋಪಗಳ ಪರಿಣಾಮಗಳನ್ನು ಎದುರಿಸಲು ಬಳಸಿಕೊಳ್ಳಬಹುದು ಎಂದು ಅವರು ಹೇಳಿದರು.
ಬರಗಾಲ ಸಂದರ್ಭದಲ್ಲಿ ರೈತರು ಅನುಭವಿಸಿದ ನಷ್ಟವನ್ನು ಭರಿಸಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ವಿಸ್ತರಿಸಲು ಒತ್ತು ನೀಡಬೇಕು. ಹವಾಮಾನ ಬದಲಾವಣೆಯ ಸನ್ನಿವೇಶಗಳನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಾಮರ್ಶೆ ನಡೆಸುವಂತೆ ಅವರು ಮುಖ್ಯ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಯಾವುದೇ ಪರಿಸ್ಥಿತಿ ಎದುರಿಸಲೂ ರಾಜ್ಯ ಸರ್ಕಾರಗಳು ಸಿದ್ಧವಾಗಿರಬೇಕು.  ಭಾರತೀಯ ಹವಾಮಾನ ಇಲಾಖೆ ಖಾರಿಫ್ ಋತುವಿನಲ್ಲಿ ನೈರುತ್ಯ ಮುಂಗಾರು ಶೇಕಡಾ 96ರಷ್ಟು ಮಳೆ ಬೀಳಬಹುದೆಂದು ಮುನ್ಸೂಚನೆ ನೀಡಿದೆ ಎಂದು ಪತ್ರದಲ್ಲಿ ಕೇಂದ್ರ ಸಚಿವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT