ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ 
ದೇಶ

ಮುಂಗಾರು ವೈಫಲ್ಯದ ಸಾಧ್ಯತೆಯನ್ನು ಎದುರಿಸಲು ಸಜ್ಜಾಗಿ: ರಾಜ್ಯಗಳಿಗೆ ಕೇಂದ್ರ ಕೃಷಿ ಸಚಿವರ ಪತ್ರ

ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮ....

ನವದೆಹಲಿ: ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಸುವಂತೆ ಕೇಂದ್ರ ಕೃಷಿ ಖಾತೆ ಸಚಿವ ರಾಧಾ ಮೋಹನ್ ಸಿಂಗ್ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಶೇಕಡಾ 25ರಷ್ಟು ಹಣವನ್ನು ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತದೆ. ಇದನ್ನು ನೈಸರ್ಗಿಕ ವಿಕೋಪಗಳ ಪರಿಣಾಮಗಳನ್ನು ಎದುರಿಸಲು ಬಳಸಿಕೊಳ್ಳಬಹುದು ಎಂದು ಅವರು ಹೇಳಿದರು.
ಬರಗಾಲ ಸಂದರ್ಭದಲ್ಲಿ ರೈತರು ಅನುಭವಿಸಿದ ನಷ್ಟವನ್ನು ಭರಿಸಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ವಿಸ್ತರಿಸಲು ಒತ್ತು ನೀಡಬೇಕು. ಹವಾಮಾನ ಬದಲಾವಣೆಯ ಸನ್ನಿವೇಶಗಳನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಾಮರ್ಶೆ ನಡೆಸುವಂತೆ ಅವರು ಮುಖ್ಯ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಯಾವುದೇ ಪರಿಸ್ಥಿತಿ ಎದುರಿಸಲೂ ರಾಜ್ಯ ಸರ್ಕಾರಗಳು ಸಿದ್ಧವಾಗಿರಬೇಕು.  ಭಾರತೀಯ ಹವಾಮಾನ ಇಲಾಖೆ ಖಾರಿಫ್ ಋತುವಿನಲ್ಲಿ ನೈರುತ್ಯ ಮುಂಗಾರು ಶೇಕಡಾ 96ರಷ್ಟು ಮಳೆ ಬೀಳಬಹುದೆಂದು ಮುನ್ಸೂಚನೆ ನೀಡಿದೆ ಎಂದು ಪತ್ರದಲ್ಲಿ ಕೇಂದ್ರ ಸಚಿವರು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT