ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಪಾಕಿಸ್ತಾನ ತನ್ನ ಕಿರುಕುಳ ನೀಡುವ ವರ್ತನೆ ನಿಲ್ಲಿಸಿಲ್ಲ: ರಾಜನಾಥ್ ಸಿಂಗ್

ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಯನ್ನು ಗೃಹ ಸಚಿವ...

ಕೈತಾಲ್(ಹರ್ಯಾಣ):  ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಯನ್ನು ಗೃಹ ಸಚಿವ ರಾಜನಾಥ್ ಸಿಂಗ್  ತೀವ್ರವಾಗಿ ಖಂಡಿಸಿದ್ದಾರೆ.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಸೌಹಾರ್ದ ಸಂಬಂಧಗಳಿಗೆ ಭಾರತದ ಪುನರಾವರ್ತಿತ ಪ್ರಯತ್ನಗಳ ಹೊರತಾಗಿಯೂ ಅದು ತನ್ನ ನಡೆಯನ್ನು ಬದಲಾಯಿಸಿಲ್ಲ ಎಂದು ಆಪಾದಿಸಿದರು.
ನೆರೆ ರಾಷ್ಟ್ರ ಎಂದು ಪರಿಗಣಿಸಿ ಅದರೊಂದಿಗೆ ಸೌಹಾರ್ದ ಸಂಬಂಧವನ್ನು ಬೆಳೆಸಲು ಹಲವು ಬಾರಿ ಯತ್ನಿಸಿದ್ದೇವೆ. ಆದರೆ ಪಾಕಿಸ್ತಾನ ತನ್ನ ಹಳೆ ಚಾಳಿಯನ್ನು ಬಿಟ್ಟಿಲ್ಲ ಎಂದು ಹೇಳಿದರು.
ಇಂದು ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ನೀಡುತ್ತಿರುವ ಎರಡನೇ ಬಾರಿಯ ಎಚ್ಚರಿಕೆಯಾಗಿದೆ. ಇದಕ್ಕೂ ಮುಂದೆ ರಾಜಸ್ತಾನದ ಪಾಲಿಯಲ್ಲಿ ಇಂದು ಬೆಳಗ್ಗೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, 2016ರ ಸರ್ಜಿಕಲ್ ಸ್ಟ್ರೈಕ್ ಪಾಕಿಸ್ತಾನಕ್ಕೆ ನೀಡಿದ ದಿಟ್ಟ ಸಂದೇಶವಾಗಿದ್ದು ಅಗತ್ಯಬಿದ್ದರೆ ಭಾರತ ಯಾವಾಗ ಬೇಕಾದರೂ ಗಡಿ ಭಾಗವನ್ನು ಹಾದು ಹೋಗಬಹುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

SCROLL FOR NEXT