ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ 
ದೇಶ

ಕಪಿಲ್ ಮಿಶ್ರಾ ಭ್ರಷ್ಟಾಚಾರ ಆರೋಪ: ಸತ್ಯಕ್ಕೆ ಎಂದಿಗೂ ಜಯವಿದೆ ಎಂದ ಕೇಜ್ರಿವಾಲ್

: ಸತ್ಯಕ್ಕೆ ಎಂದಿಗೂ ಜಯಿಸಲಿದ್ದು, ಜಯದ ಆರಂಭ ನಾಳೆಯ ವಿಶೇಷ ಅಧಿವೇಶನದಿಂದಲೇ ಆರಂಭವಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ಸತ್ಯಕ್ಕೆ ಎಂದಿಗೂ ಜಯಿಸಲಿದ್ದು, ಜಯದ ಆರಂಭ ನಾಳೆಯ ವಿಶೇಷ ಅಧಿವೇಶನದಿಂದಲೇ ಆರಂಭವಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ. 
ಆಮ್ ಆದ್ಮಿ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಸರಣಿ ಆರೋಪಗಳನ್ನು ಮಾಡಿದ್ದರು. ನಿನ್ನೆಯಷ್ಟೇ ಮತ್ತೆ ಕೇಜ್ರಿವಾಲ್ ವಿರುದ್ಧ ಭೂಹಗರಣ ಮತ್ತು ಬೋಗಸ್ ಬಿಲ್ ಸೃಷ್ಟಿಯ ಗಂಭೀರ ಆರೋಪವನ್ನು ಮಾಡಿದ್ದರು. 
ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು, ಸತ್ಯಕ್ಕೆ ಎಂದಿಗೂ ಜಯಿಸಲಿದೆ. ಜಯದ ಆರಂಭ ನಾಳೆ ದೆಹಲಿಯಲ್ಲಿ ನಡೆಯಲಿರುವ ವಿಶೇಷ ಅಧಿವೇಶನದಿಂದಲೇ ಆರಂಭಗೊಳ್ಳಲಿದೆ ಎಂದು ಹೇಳಿಕೊಂಡಿದ್ದಾರೆ. 
ಕೇಜ್ರಿವಾಲ್ ಅವರು ತಮ್ಮ ಭಾವನಿಗಾಗಿ ರೂ.50 ಕೋಟಿ ಮೌಲ್ಯದ ಭೂಹಗರಣ ಮಾಡಿದ್ದಾರೆ. ಇದಕ್ಕಾಗಿ ಡೀಲ್ ಕುದುರಿಸಿದ್ದು ಸಚಿವ ಸತ್ಯೇಂದ್ರ ಜೈನ್. ಛತರ್ ಪುರದಲ್ಲಿ ಕೇಜ್ರಿವಾಲ್ ಅವರ ಭಾವ ಬನ್ಸಲ್ ಅವರಿಗಾಗಿ 7 ಎಕರೆ ಲ್ಯಾಂಡ್ ಡೀಲ್ ಮಾಡುತ್ತಿದ್ದೇನೆಂದು ಜೈನ್ ನನಗೆ ಹೇಳಿದ್ದರು. 
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜೈನ್ ಅವರು ಲೋಕೋಪಯೋಗಿ ಇಲಾಖೆಯಲ್ಲಿ ರೂ.10 ಕೋಟಿ ನಕಲಿ ಬಿಲ್ ಸೃಷ್ಟಿಸಿದ್ದರು ಎಂದು ಮಿಶ್ರಾ ಅವರು ಆರೋಪಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT