ದೇಶ

ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನ, ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ

Manjula VN
ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ಮೂಲಕ ಭಾರತದ ಒಳ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಬುಧವಾರ ಹಿಮ್ಮೆಟ್ಟಿಸಿದೆ. 
ಸಾಕಷ್ಟು ಶಸ್ತ್ರಸಜ್ಜಿತರಾಗಿ ಬಂದಿದ್ದ ಉಗ್ರರ ಗುಂಪೊಂದು ಬಾರಾಮುಲ್ಲಾದ ಗಡಿ ನಿಯಂತ್ರಣ ರೇಳೆ ಬಳಿ ಬಂದು ಭಾರತದ ಒಳಗೆ ನುಸುಳಲು ಯತ್ನ ನಡೆಸುತ್ತಿತ್ತು. ಈ ವೇಳೆ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಉಗ್ರರು ಸ್ಥಳದಿಂದ ಕಾಲ್ಕಿತ್ತುವಂತೆ ಮಾಡಿದೆ ಎಂದು ತಿಳಿದುಬಂದಿದೆ. 
ಬಾರಾಮುಲ್ಲಾ ಜಿಲ್ಲೆ ರಾಮ್ಪುರ ಸೆಕ್ಟರ್ ಬಳಿ ಕಳೆದ ರಾತ್ರಿ ಉಗ್ರರ ಗುಂಪು ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿತ್ತು. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ದಿಟ್ಟ ಉತ್ತರವನ್ನು ನೀಡಿದ್ದು, ಉಗ್ರರ ಯತ್ನವನ್ನು ವಿಫಲವಾಗುವಂತೆ ಮಾಡಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಗಡಿ ನುಸುಳಲು ಉಗ್ರರು ಯತ್ನ ನಡೆಸುತ್ತಿರುವ ಹಿನ್ನಲೆಯಲ್ಲಿ, ಉಗ್ರರ ನಿಗ್ರಹಕ್ಕಾಗಿ ಸೇನಾ ಪಡೆ ಸ್ಥಳದಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. 
SCROLL FOR NEXT