ಲಾಲು ಪ್ರಸಾದ್ ಯಾದವ್ 
ದೇಶ

ಇವಿಎಂ ವಿವಾದ: ಕೇಜ್ರಿವಾಲ್ ಬೆಂಬಲಕ್ಕೆ ನಿಂತ ಲಾಲು ಪ್ರಸಾದ್ ಯಾದವ್

ವಿದ್ಯುನ್ಮಾನ ಮತಯಂತ್ರ(ಇವಿಎಂ)ಯನ್ನು ತಿರುಚಬಹುದು ಎಂಬ ರಾಜಕೀಯ ವಾದ ದಿನದಿಂದ ದಿನಕ್ಕೆ ಬಲವಾಗುತ್ತಿದ್ದು,

ಪಾಟ್ನಾ: ವಿದ್ಯುನ್ಮಾನ ಮತಯಂತ್ರ(ಇವಿಎಂ)ಯನ್ನು ತಿರುಚಬಹುದು ಎಂಬ ರಾಜಕೀಯ ವಾದ ದಿನದಿಂದ ದಿನಕ್ಕೆ ಬಲವಾಗುತ್ತಿದ್ದು, ಇವಿಎಂ ಹ್ಯಾಕ್ ಮಾಡಬಹುದು ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಾದವನ್ನು ಈಗ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬೆಂಬಲಿಸಿದ್ದಾರೆ.
ಇವಿಎಂ ತಿರುಚುವ ವಿಚಾರ ತುಂಬಾ ಗಂಭೀರ ವಿಷಯವಾಗಿದ್ದು, ಒಂದು ರಹಸ್ಯ ಕೋಡ್ ಸೇರಿಸುವ ಮೂಲಕ ಅದನ್ನು ಹ್ಯಾಕ್ ಮಾಡಬಹುದು ಎಂಬುದನ್ನು ಕೇಜ್ರಿವಾಲ್ ಅವರ ಶಾಸಕ ಪ್ರಾತ್ಯಕ್ಷಿಕೆ ಮಾಡಿ ತೋರಿಸಿದ್ದಾರೆ ಎಂದು ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.
ಇದೇ ವೇಳೆ ಆರ್ ಜೆಡಿ ರಾಷ್ಟ್ರೀಯ ವಕ್ತಾರ ಮನೋಜ್ ಜಾ ಅವರು ಇವಿಎಂ ವಿವಾದ ಸಂಬಂಧ ಕೇಂದ್ರ ಚುನಾವಣಾ ಆಯೋಗ ಮೇ 12ರಂದು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲಿದ್ದಾರೆ ಎಂದು ಲಾಲು ತಿಳಿಸಿದ್ದಾರೆ.
ನಿನ್ನೆ ದೆಹಲಿ ವಿಧಾನಸಭೆಯಲ್ಲಿ ಇವಿಎಂ ತಿರುಚುವುದು ಹೇಗೆ ಎಂಬುದುರ ಬಗ್ಗೆ ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ಪ್ರಾತ್ಯಕ್ಷಿಕೆ ಮೂಲಕ ತೋರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT