ಸಾಂದರ್ಭಿಕ ಚಿತ್ರ 
ದೇಶ

ನೋಟು ನಿಷೇಧದ ಪ್ರಕ್ರಿಯೆ ಬಹಿರಂಗಪಡಿಸಿದರೆ ದೇಶದ ಆರ್ಥಿಕ ಹಿತಾಸಕ್ತಿಗೆ ಧಕ್ಕೆ: ಆರ್ ಬಿಐ

ಪ್ರಧಾನ ಮಂತ್ರಿಯವರು ನೋಟು ಅಮಾನ್ಯತೆಗೆ ಆದೇಶ ನೀಡಿ 6 ತಿಂಗಳು ಕಳೆದಿದ್ದು ನೋಟು ನಿಷೇಧದ ಪ್ರಕ್ರಿಯೆಯನ್ನು...

ನವದೆಹಲಿ: ಪ್ರಧಾನ ಮಂತ್ರಿಯವರು ನೋಟು ಅಮಾನ್ಯತೆಗೆ ಆದೇಶ ನೀಡಿ 6 ತಿಂಗಳು ಕಳೆದಿದ್ದು ನೋಟು ನಿಷೇಧದ ಪ್ರಕ್ರಿಯೆಯನ್ನು ಬಹಿರಂಗಪಡಿಸಲು ನಿರಾಕರಿಸಿದೆ. ದೇಶದ ಆರ್ಥಿಕ ಹಿತಾಸಕ್ತಿಗಳಿಗೆ ಹಾನಿಕಾರಕ ಎಂದು ಅದು ಹೇಳಿದೆ.
ನೋಟು ನಿಷೇಧದ ಪ್ರಕ್ರಿಯೆ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಿಸರ್ವ್ ಬ್ಯಾಂಕ್ ಇಂತಹ ಮಾಹಿತಿಗಳನ್ನು ಬಹಿರಂಗಪಡಿಸುವುದರಿಂದ ಭಾರತ ಸರ್ಕಾರದ ಭವಿಷ್ಯದ ಆರ್ಥಿಕ ಅಥವಾ ಹಣಕಾಸಿನ ನೀತಿಗಳಿಗೆ ಅಡ್ಡಿಯುಂಟಾಗುತ್ತದೆ ಎಂದು ಹೇಳಿದೆ.
ಹಳೆಯ 500 ಮತ್ತು 1000ದ ನೋಟುಗಳ ಚಲಾವಣೆಯನ್ನು ರದ್ದುಪಡಿಸಲು ತನ್ನ ಕಚೇರಿಯಲ್ಲಿ ನಡೆಸಿದ ಸಭೆಗಳು, ನಡೆಸಲಾದ ಚರ್ಚೆಗಳ ಕುರಿತ ಪ್ರತಿಯೊಂದನ್ನು ನೀಡುವಂತೆ ಮತ್ತು ಪ್ರಧಾನಿ ಕಾರ್ಯಾಲಯ ಹಾಗೂ ಹಣಕಾಸು ಸಚಿವಾಲಯ ಜೊತೆ ನೋಟುಗಳ ಅಮಾನ್ಯತೆ ವಿಷಯವಾಗಿ ಮಾಹಿತಿ ನೀಡುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಕೋರಲಾಗಿತ್ತು.
ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ವಿಷಯಗಳು ಬಹಳ ಸೂಕ್ಷ್ಮವಾಗಿದೆ. ನೋಟುಗಳ ಚಲಾವಣೆಗೆ ಮುನ್ನ ನಡೆಸಲಾದ ಚರ್ಚೆ, ಅಭಿಪ್ರಾಯ, ಅಂಕಿಅಂಶ, ಅಧ್ಯಯನ ಮತ್ತು ಸಮೀಕ್ಷೆಗಳ ಕುರಿತು ಕೇಳಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT