ಕಪಿಲ್ ಮಿಶ್ರಾ 
ದೇಶ

ನೀರಿನ ಟ್ಯಾಂಕರ್ ಹಗರಣ: ಕಪಿಲ್ ಮಿಶ್ರಾ ಹೇಳಿಕೆ ದಾಖಲಿಸಿದ ಎಸಿಬಿ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) 400 ಕೋಟಿಯ ನೀರಿನ ಟ್ಯಾಂಕರ್ ಹಗರಣದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್...

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) 400 ಕೋಟಿಯ ನೀರಿನ ಟ್ಯಾಂಕರ್ ಹಗರಣದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿದ್ದ ವಜಾಗೊಂಡ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ ಅವರ ಹೇಳಿಕೆಯನ್ನು ಗುರುವಾರ ದಾಖಲಿಸಿಕೊಂಡಿದೆ.
ಇಂದು ಮಧ್ಯಾಹ್ನ ಎಸಿಬಿ ಕಚೇರಿಗೆ ಆಗಮಿಸಿದ ಕಪಿಲ್ ಮಿಶ್ರಾ ಅವರ ಹೇಳಿಕೆಯನ್ನು ಎಸಿಬಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಎಸಿಬಿ ಕಚೇರಿಗೆ ಭೇಟಿ ನೀಡಿದ್ದ ಕಪಿಲ್ ಮಿಶ್ರಾ ಅವರು, 400 ಕೋಟಿ ರುಪಾಯಿ ನೀರಿನ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ವಿರುದ್ಧ ದಾಖಲೆಗಳನ್ನು ಸಲ್ಲಿಸಿದ್ದರು.
ದೆಹಲಿ ಮುಖ್ಯಮಂತ್ರಿ ಹಾಗೂ ಅವರ ಇಬ್ಬರು ವ್ಯಕ್ತಿಗಳು ಟ್ಯಾಂಕರ್ ಹಗರಣ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಹೀಗಾಗಿಯೇ ಹಗರಣದ ತನಿಖೆ ವಿಳಂಬವಾಗುತ್ತಿದೆ ಎಂದು ಕಪಿಲ್ ಮಿಶ್ರಾ ಅವರು ಆರೋಪಿಸಿದ್ದರು.
ಈ ಹಿಂದೆ ಟ್ಯಾಂಕರ್ ಹಗರಣದ ಆರೋಪಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಅವರನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಮಿಶ್ರಾ ಆರೋಪಿಸಿದ್ದರು. ಈಗ ಎಎಪಿ ಸರ್ಕಾರ ಶೀಲಾ ದಿಕ್ಷಿತ್ ಅವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

ಬೆಂಗಳೂರಿನಲ್ಲಿ ಭೀಕರ ದುರಂತ: ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು!

'ನೀ ನನಗೆ ಇಷ್ಟ ಇಲ್ಲ': ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ; ಪ್ರಭಾವಿ ಸಚಿವರ PAಯಿಂದಲೇ ದೋಖಾ?

'ಮಲ್ಲಿಕಾರ್ಜುನ ಖರ್ಗೆಯಿಂದ ಸದಾ ಒತ್ತಡಕ್ಕೆ ಒಳಗಾಗಿರುತ್ತೇನೆ': ರಾಜ್ಯಸಭೆ ಸಭಾಪತಿ ಸಿಪಿ ರಾಧಾಕೃಷ್ಣನ್

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ