ವಧು 
ದೇಶ

ಕುಡಿಯುವ ನೀರಿನ ಸಮಸ್ಯೆ: ಈ ಹಳ್ಳಿಯ ಯುವಕರಿಗೆ ವಧುಗಳೇ ಸಿಗುತ್ತಿಲ್ಲ!

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಮಧ್ಯಪ್ರದೇಶದ ಚತ್ತಾರ್ಪುರ್ ಜಿಲ್ಲೆಯ ಜನರು ಅನಿರೀಕ್ಷಿತ ಸಮಸ್ಯೆಯೊಂದಕ್ಕೆ ಸಿಲುಕಿದ್ದಾರೆ...

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಮಧ್ಯಪ್ರದೇಶದ ಚತ್ತಾರ್ಪುರ್ ಜಿಲ್ಲೆಯ ಜನರು ಅನಿರೀಕ್ಷಿತ ಸಮಸ್ಯೆಯೊಂದಕ್ಕೆ ಸಿಲುಕಿದ್ದಾರೆ. ಬರ ಪರಿಸ್ಥಿತಿಯಿಂದಾಗಿ ಹಳ್ಳಿಯ ಯುವಕರಿಗೆ ತಮ್ಮ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡಲು ಪೋಷಕರು ಹಿಂದೇಟು ಹಾಕುತ್ತಿದ್ದಾರಂತೆ. 
ಚತ್ತಾರ್ಪುರ್ ಜಿಲ್ಲೆಯ ಬುಕ್ಸಾವ್ ಗ್ರಾಮದ ಹೆಣ್ಣುಗಳಿಗೆ ಗಂಡು, ಗಂಡುಗಳಿಗೆ ಹೆಣ್ಣು ಸಿಗದಂತಾ ಪರಿಸ್ಥಿತಿ ಎದುರಾಗಿದೆ. ಈ ಗ್ರಾಮ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದೆ ಎಂದು ತಿಳಿದ ಹೆಣ್ಣಿನ ಪೋಷಕರು ತಮ್ಮ ಮಗಳನ್ನು ಮದುವೆ ಮಾಡಲು ಹಿಂದೇಟು ಹಾಕಿದ್ದು ಗ್ರಾಮದ ಯುವಕನ ಮದುವೆ ಮುರಿದುಬಿದ್ದಿದೆ. 
ಬುಕ್ಸಾವ್ ಗ್ರಾಮದಲ್ಲಿ ಸರಿಸುಮಾರು ಒಂದು ಸಾವಿರ ಮಂದಿ ವಾಸಿಸುತ್ತಿದ್ದಾರೆ. ಇಲ್ಲಿ ಈ ಮೊದಲು ಎರಡು ಕೈ ಪಂಪುಗಳಿದ್ದು ಇದೀಗ ಅವುಗಳು ಒಣಗಿದೆ. ಹೀಗಾಗಿ ಇಲ್ಲಿನ ನಿವಾಸಿಗಳು ನೀರು ತರಲು ದೂರಕ್ಕೆ ಹೋಗಬೇಕಾಗಿದೆ. ಈ ಎಲ್ಲಾ ಸಮಸ್ಯೆಗಳಿಂದ ಈ ಹಳ್ಳಿಯ ಯುವಕರಿಗೆ ಹೆಣ್ಣುಗಳನ್ನು ನೀಡಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. 
ನೀರಿನ ಕೊರತೆ ಹಿನ್ನೆಲೆಯ ಇತ್ತೀಚೆಗಷ್ಟೇ ಇಲ್ಲಿನ ನಿವಾಸಿ ಜಾಸು ಹರಿವಾಲ್ ಅವರ ಪುತ್ರನ ಮದುವೆ ಮುರಿದುಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹರಿವಾಲ್ ವಧುವಿನ ಪೋಷಕರಿಗೆ ತಮ್ಮ ಮಗಳನ್ನು ನನ್ನ ಮಗನಿಗೆ ಮದುವೆ ಮಾಡಿಕೊಡಲು ತೀರ್ಮಾನಿಸಿದ್ದರು. ಆದರೆ ನೀರಿನ ಸಮಸ್ಯೆ ಎದುರಾಗಿದೆ ಎಂದು ತಿಳಿದ ವಧುವಿನ ಪೋಷಕರು ಮದುವೆಯನ್ನು ರದ್ದು ಮಾಡಿದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT