ಹರಿಯಾಣ: ಸರ್ಕಾರಿ ಶಾಲೆಯ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು ಪತ್ತೆ 
ದೇಶ

ಹರಿಯಾಣ: ಸರ್ಕಾರಿ ಶಾಲೆಯ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು ಪತ್ತೆ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಊಟದ ಗುಣಮಟ್ಟದ ಸಂದೇಹಗಳು ಮೂಡುತ್ತಿರುವ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಹರಿಯಾಣ ರಾಜ್ಯದ ಫರೀದಾಬಾದ್'ನ ಸರ್ಕಾರಿ ಶಾಲೆಯೊಂದರ ಮಧ್ಯಾಹ್ನದ...

ಫರೀದಾಬಾದ್: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಊಟದ ಗುಣಮಟ್ಟದ ಸಂದೇಹಗಳು ಮೂಡುತ್ತಿರುವ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಹರಿಯಾಣ ರಾಜ್ಯದ ಫರೀದಾಬಾದ್'ನ ಸರ್ಕಾರಿ ಶಾಲೆಯೊಂದರ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವೊಂದು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. 
ಫರೀದಾಬಾದ್ ನ ಸರ್ಕಾರಿ ರಾಜಕೀಯ ಗರ್ಲ್ಸ್ ಸೀನಿಯರ್ ಸೆಕೆಂಡರಿ ಶಾಲೆಯಲ್ಲಿ ನೀಡಲಾಗುತ್ತಿದ್ದ ಮಧ್ಯಾಹ್ನದ ಊಟದಲ್ಲಿ ಉದ್ದನೆಯ ಸತ್ತ ಮರಿ ಹಾವೊಂದು ಕಂಡು ಬಂದಿದೆ. 
ಊಟದಲ್ಲಿ ಹಾವು ಕಂಡು ಬರುತ್ತಿದ್ದಂತೆಯೇ ಮಕ್ಕಳು ಊಟ ಸೇವಿಸುವುದನ್ನು ಕೂಡಲೇ ನಿಲ್ಲಿಸಲಾಗಿದೆ. ಆದರೆ, ದುರಾದೃಷ್ಟವಶಾತ್ ಕೆಲ ಮಕ್ಕಳು ಆಹಾರವನ್ನು ಸೇವಿಸಿ ಬಿಟ್ಟಿದ್ದರು. ಊಟ ಸೇವಿಸಿದ ಕೆಲ ನಿಮಿಷಗಳಲ್ಲೇ ಕೆಲ ಮಕ್ಕಳಿಕೆ ವಾಂತಿ ಉಂಟಾಗಿ ಅಸ್ವಸ್ಥರಾಗಿದರು. 
ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು ಮಕ್ಕಳಿಗೆ ಊಟ ಬಡಿಸುವುದಕ್ಕೂ ಮುನ್ನ ಅದರ ರುಚಿಯನ್ನು ಪರೀಕ್ಷಿಸಲು ಸ್ವಲ್ಪ ಪ್ರಮಾಣದ ಆಹಾರವನ್ನು ಹಾಕಿಕೊಂಡಿದ್ದರು. ಈ ವೇಳೆ ಆಹಾರದಲ್ಲಿ ಸತ್ತ ಹಾವಿನ ಮರಿ ಇರುವುದು ಕಂಡುಬಂದಿದೆ. ಕೂಡಲೇ ಅವರು ಮಕ್ಕಳು ಆಹಾರ ಸೇವಿಸದಂತೆ ಸೂಚಿಸಿದ್ದರು. 
ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು ಇರುವ ಸುದ್ದಿ ಕೇಳಿದೊಡನೆಯೇ ಆಘಾತವಾಯಿತು. ನಮಗೆ ಮೊದಲೇ ಆಹಾರದಿಂದ ಕೆಟ್ಟ ಹಾಗೂ ವಿಚಿತ್ರವಾದ ವಾಸನೆ ಬರುತ್ತಿತ್ತು. ಆಹಾರದಲ್ಲಿ ಏನೋ ಆಗಿದೆ ಎಂದು ತಿಳಿದಿದ್ದೆವು. ಅಷ್ಟರಲ್ಲಾಗಲೇ ಆಹಾರದಲ್ಲಿ ಸತ್ತ ಮರಿ ಹಾವು ಇದೆ, ಯಾರೂ ಊಟ ಸೇವಿಸಬಾರದು ಎಂಬ ಸೂಚನೆ ಬಂದು ಇದನ್ನು ಕೇಳಿ ಬಹಳ ಭಯವಾಯಿತು ಎಂದು ಶಾಲಾ ಮಕ್ಕಳು ಹೇಳಿಕೊಂಡಿದ್ದಾರೆ. 
ಆಹಾರದಲ್ಲಿ ಹಾವು ಕಂಡು ಬರುತ್ತಿದ್ದಂತೆಯೇ ಶಾಲೆಯ ಪ್ರಾಂಶುಪಾಲರಾದ ಬೃಜ್ ಬಾಲಾ ಅವರು ಹಿರಿಯ ಆಧಿಕಾರಿಗಳಿಗೆ ಹಾಗೂ ಶಾಲೆಗೆ ಮಧ್ಯಾಹ್ನದ ಊಟ ಪೂರೈಸುವ ಇಸ್ಕಾನ್ ಫುಡ್ ರಿಲೀಫ್ ಫೌಂಡೇಶನ್'ಗೆ ಮಾಹಿತಿ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT