ಸಂಗ್ರಹ ಚಿತ್ರ 
ದೇಶ

ಕಾಶ್ಮೀರಿಗರ ಹತ್ಯೆ ಮಾಡಲೂ ಹಿಜ್ಬುಲ್ ಮುಜಾಹಿದ್ದೀನ್ ಹಿಂಜರಿಯುವುದಿಲ್ಲ; ರಕ್ಷಣಾ ತಜ್ಞರು

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಹತ್ಯೆ ಮಾಡುವಾಗ ಕಾಶ್ಮೀರಿಗರೇ ಅಥವಾ ಕಾಶ್ಮೀರಿಗರಲ್ಲವೇ ಎಂಬುದನ್ನು ನೋಡುವುದಿಲ್ಲ. ಯಾರನ್ನೂ ಬೇಕಾದರೂ ಅವರು ಹತ್ಯೆ ಮಾಡುತ್ತಾರೆಂದು...

ನವದೆಹಲಿ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಹತ್ಯೆ ಮಾಡುವಾಗ ಕಾಶ್ಮೀರಿಗರೇ ಅಥವಾ ಕಾಶ್ಮೀರಿಗರಲ್ಲವೇ ಎಂಬುದನ್ನು ನೋಡುವುದಿಲ್ಲ. ಯಾರನ್ನೂ ಬೇಕಾದರೂ ಅವರು ಹತ್ಯೆ ಮಾಡುತ್ತಾರೆಂದು ರಕ್ಷಣಾ ತಜ್ಞರು ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ. 
ಯುವ ಸೇನಾಧಿಕಾರಿ ಉಮರ್ ಫಯಾಜ್ ಹತ್ಯೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಕ್ಷಣಾ ತಜ್ಞ ಪಿ.ಕೆ. ಸೆಹ್ಗಲ್ ಅವರು, ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಇತರೆ ಉಗ್ರ ಸಂಘಟನೆಗಳು ತಮ್ಮ ಶತ್ರುಗಳು ಎಂಬುದನ್ನು ಜಮ್ಮು ಮತ್ತು ಕಾಶ್ಮೀರ ಜನತೆ ಮನವರಿಕೆ ಮಾಡಿಕೊಳ್ಳಬೇಕಿದೆ. ಉಗ್ರರು ಹತ್ಯೆ ಮಾಡುವಾಗ ಕಾಶ್ಮೀರಿಗರೇ, ಅಲ್ಲವೇ ಎಂಬುದನ್ನು ಪರಿಶೀಲಿಸುವುದಿಲ್ಲ. ಕೊಲ್ಲುವುದಷ್ಟೇ ಅವರ ಉದ್ದೇಶವಾಗಿರುತ್ತದೆ ಎಂದು ಹೇಳಿದ್ದಾರೆ. 
ಕಾಶ್ಮೀರದಲ್ಲಿರುವ ಸ್ಥಳೀಯ ಜನರು ಈಗಲಾದರೂ ಕಣ್ಣುತೆರೆದು ನೋಡಬೇಕು. ಉಗ್ರರಿಗೆ ಸಹಾಯ ಮಾಡುವುದನ್ನು ನಿಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ. 
ಶೋಪಿಯಾನ್ ಜಿಲ್ಲೆಯಲ್ಲಿ ಸಂಬಂಧಿಕರೊಬ್ಬರ ಮದುವೆಗೆಂದು ಹೋಗಿದ್ದ ವೇಳೆ ಮದುವೆ ಮನೆಗೆ ನುಗ್ಗಿದ್ದ ಶಸ್ತ್ರಾಸ್ತ್ರಧಾರಿ ಉಗ್ರರ ಗುಂಪೊಂದು ಬೆದರಿಸಿ ಯುವ ಸೇನಾಧಿಕಾರಿ ಉಮರ್ ಫಯಾಜ್ ಅವರನ್ನು ಅಪಹರಿಸಿತ್ತು. ಕೆಲ ದಿನಗಳ ಹಿಂದಷ್ಟೇ ಫಯಾಜ್ ಅವರ ಮೃತದೇಹ ಬಸ್ ನಿಲ್ದಾಣವೊಂದರಲ್ಲಿ ದೊರಕಿತ್ತು. 
ಫಯಾಜ್ ಅವರನ್ನು ಅಪಹರಿಸಿದ್ದ ಉಗ್ರರ ಗುಂಪು ಅವರ ತಲೆಗೆ ಹಾಗೂ ಎದೆಗೆ ಹತ್ತಿರದಿಂದಲೇ ಗುಂಡು ಹಾಕಿಸಿ ಹತ್ಯೆ ಮಾಡಿದ್ದರೆಂದು ವರದಿಗಳು ತಿಳಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT