ಕಪಿಲ್ ಮಿಶ್ರ 
ದೇಶ

ವಿಷಯಾಂತರ ಮಾಡಲು ಆಪ್ ಹೊಸ ನಾಟಕ ಮಾಡಬಹುದು: ಕಪಿಲ್ ಮಿಶ್ರಾ ಎಚ್ಚರಿಕೆ

4 ದಿನಗಳಿಂದ ಉಪವಾಸ ಪ್ರತಿಭಟನೆ ಕೈಗೊಂಡಿರುವ ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಕಪಿಲ್ ಮಿಶ್ರಾ, ಆಮ್ ಆದ್ಮಿ ಪಕ್ಷ ವಿಷಯಾಂತರ ಮಾಡಲು ಹೊಸ ನಾಟಕವನ್ನು ಪ್ರಾರಂಭಿಸಬಹುದು ಎಂದು ಎಚ್ಚರಿಸಿದ್ದಾರೆ.

ನವದೆಹಲಿ: 4 ದಿನಗಳಿಂದ ಉಪವಾಸ ಪ್ರತಿಭಟನೆ ಕೈಗೊಂಡಿರುವ ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಕಪಿಲ್ ಮಿಶ್ರಾ, ಆಮ್ ಆದ್ಮಿ ಪಕ್ಷ ವಿಷಯಾಂತರ ಮಾಡಲು ಹೊಸ ನಾಟಕವನ್ನು ಪ್ರಾರಂಭಿಸಬಹುದು ಎಂದು ಎಚ್ಚರಿಸಿದ್ದಾರೆ. 
ವಿದೇಶ ಪ್ರವಾಸದ ವಿವಾದದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಆಮ್ ಆದ್ಮಿ ಪಕ್ಷ ಹೊಸ ನಾಟಕ ಪ್ರಾರಂಭಿಸುವ ಸಾಧ್ಯತೆ ಇದೆ ಎಂದು ಕಪಿಲ್ ಶರ್ಮಾ ಟ್ವೀಟ್ ಮಾಡಿದ್ದಾರೆ. ಕಳ್ಳ ದಾಖಲೆ, ಸಾಕ್ಷಿಗಳನ್ನೆಲ್ಲಾ ತನ್ನ ಕೈಗೆ ನೀಡುವಂತೆ ಆಗ್ರಹಿಸುತ್ತಿದ್ದಾನೆ. ಆ ನಂತರ ತಾನೇ ನ್ಯಾಯಾಧೀಶನಾಗಿ ತನ್ನನ್ನು ನಿರಪರಾಧಿ ಎಂದು ಘೋಷಿಸಿಕೊಳ್ಳುತ್ತಾನೆ ಎಂದು ಆಮ್ ಆದ್ಮಿ ಪಕ್ಷ ಹಾಗೂ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಪಿಲ್ ಮಿಶ್ರಾ ಆರೋಪ ಮಾಡಿದ್ದಾರೆ. 
ಇದೇ ವೇಳೆ ಟ್ವಿಟರ್ ನಲ್ಲಿ ಮಹಾಭಾರತದ ಚಿತ್ರ ಹಾಕಿರುವ ಕಪಿಲ್ ಶರ್ಮಾ, ನಿಮ್ಮ ಎಲ್ಲಾ ಸಂಚು, ಉಪಾಯಗಳಿಗೆ ನಾನು ಕೊಡಲು ಸಾಧ್ಯವಿರುವುದು ಇದೊಂದೇ ಉತ್ತರ. ಮಹಾಭಾರತ ಸಂಚು, ಉಪಾಯಗಳ ಹೊರತಾಗಿಯೂ ಕೆಡುಕಿನ ವಿರುದ್ಧ ಒಳ್ಳೆಯದರ ಗೆಲುವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ. 
ಆಮ್ ಆದ್ಮಿ ಪಕ್ಷದ 5 ನಾಯಕರ ವಿದೇಶ ಪ್ರವಾಸಕ್ಕೆ ಬಂದಿರುವ ವಿದೇಶಿ ದೇಣಿಗೆ ಕುರಿತು ಅರವಿಂದ್ ಕೇಜ್ರಿವಾಲ್ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಆಗ್ರಹಿಸಿ ಕಪಿಲ್ ಮಿಶ್ರಾ ನಾಲ್ಕು ದಿನಗಳಿಂದ ಉಪವಾಸ ಪ್ರತಿಭಟನೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT