ವಿನ್ಸಿ 
ದೇಶ

ಬದಲಾವಣೆಗೆ ನಾಂದಿ ಹಾಡಿದ ಕೊಚ್ಚಿ ಮೆಟ್ರೊ, 23 ಲೈಂಗಿಕ ಅಲ್ಪಸಂಖ್ಯಾತರಿಗೆ ಉದ್ಯೋಗ

ಕೊಚ್ಚಿ ಮೆಟ್ರೊ 23 ಮಂದಿ ಲೈಂಗಿಕ ಅಲ್ಪಸಂಖ್ಯಾತರಿಗೆ ಉದ್ಯೋಗ ನೀಡುವ ಮೂಲಕ ಹೊಸ ಬದಲಾವಣಗೆ ನಾಂದಿ....

ಕೊಚ್ಚಿ: ಕೊಚ್ಚಿ ಮೆಟ್ರೊ 23 ಮಂದಿ ಲೈಂಗಿಕ ಅಲ್ಪಸಂಖ್ಯಾತರಿಗೆ ಉದ್ಯೋಗ ನೀಡುವ ಮೂಲಕ ಹೊಸ ಬದಲಾವಣಗೆ ನಾಂದಿ ಹಾಡಿದ್ದು, ಭಿಕ್ಷೆಗಾಗಿ ರೈಲನ್ನು ಬಳಸುತ್ತಿದ್ದ ತೃತೀಯ ಲಿಂಗಿಗಳು ಈಗ ರೈಲು ಪ್ರಯಾಣಿಕರ ಸೇವೆಗೆ ಸಜ್ಜಾಗಿದ್ದಾರೆ.
ಲೈಂಗಿಕ ಅಲ್ಪಸಂಖ್ಯಾತರು ಎಂದರೆ ಮೂಗು ಮುರಿಯುವ ಕಾಲದಲ್ಲಿ, ಸಮಾಜ ಅವರನ್ನು ಸಮಾಜದ ಭಾಗ ಎಂದು ಇನ್ನೂ ಸಂಪೂರ್ಣವಾಗಿ ಒಪ್ಪದ ಕಾಲದಲ್ಲಿ ಕೇರಳದ ಕೊಚ್ಚಿ ರೈಲು ನಿಗಮ 23 ಮಂದಿ ಲೈಂಗಿಕ ಅಲ್ಪಸಂಖ್ಯಾತರನ್ನು ಸೇವೆಗೆ ನೇಮಿಸಿಕೊಂಡಿದೆ. ಈ ಮೂಲಕ ನಿಗಮ ಹೊಸ ಹೆಜ್ಜೆ ಇಟ್ಟಿದೆ.
ನಿಗಮದ ಟಿಕೆಟ್‌ ಕೌಂಟರ್‌ ಮತ್ತು ನಿಲ್ದಾಣ ಶುಚಿಗೊಳಿಸುವ ಕೆಲಸಗಳಿಗೆ ಲೈಂಗಿಕ ಅಲ್ಪಸಂಖ್ಯಾತರನ್ನು ನೇಮಿಸಿಕೊಳ್ಳಲಾಗಿದೆ. ಈ ತಿಂಗಳ ಕೊನೆಗೆ ಈ ಎಲ್ಲಾ 23 ಮಂದಿ ಕೆಲಸ ಆರಂಭಿಸಲಿದ್ದಾರೆ.
ಮೆಟ್ರೊ ರೈಲು ನಿಲ್ದಾಣದ ವಿವಿಧ ಹುದ್ದೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೂ ಉದ್ದೋಗ ನೀಡಲಾಗಿದ್ದು, ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕೊಚ್ಚಿ ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಇಲಿಯಾಸ್ ಜಾರ್ಜ್ ಅವರು ತಿಳಿಸಿದ್ದಾರೆ. ಅಲ್ಲದೆ ಈ ನಿರ್ಧಾರದಿಂದಾಗಿ ಲೈಂಗಿಕ ಅಲ್ಪಸಂಖ್ಯಾತರ ಸಮುದಾಯದಲ್ಲಿ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. 
ಕೊಚ್ಚಿ ಮೆಟ್ರೊ ಲೈಂಗಿಕ ಅಲ್ಪ ಸಂಖ್ಯಾತರಿಗೆ ಉದ್ಯೋಗ ನೀಡಿದ ಮೊದಲ ಸರ್ಕಾರಿ ಸಂಸ್ಥೆಯಾಗಿದ್ದು, ಇನ್ನು ಮುಂದೆ ಕೇರಳದ ಇತರೆ ಸರ್ಕಾರಿ ಸಂಸ್ಥೆಗಳು ಅವರಿಗೆ ಉದ್ಯೋಗ ನೀಡುವ ವಿಶ್ವಾಸವಿದೆ ಎಂದಿದ್ದಾರೆ. 
ಕೊಚ್ಚಿ ರೈಲು ನಿಗಮ ನಮ್ಮನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ತುಂಬಾ ಸಂತೋಷ ತಂದಿದೆ. ನಾವು ನಿಗಮದಲ್ಲಿ ಕೆಲಸಕ್ಕೆ ಸೇರಿದ್ದೇವೆ ಎಂಬ ಬಗ್ಗೆ ಹೆಮ್ಮೆ ಇದೆ. ಮೆಟ್ರೊ ಪ್ರಯಾಣಿಕರ ಸೇವೆ ಮಾಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೊಸದಾಗಿ ಕೆಲಸಕ್ಕೆ ಸೇರಿರುವ ಲೈಂಗಿಕ ಅಲ್ಪಸಂಖ್ಯಾತರಾದ ವಿನ್ಸಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT