ಉಗ್ರ ಝಾಕೀರ್ ಮುಸಾ 
ದೇಶ

ಪ್ರತ್ಯೇಕತಾವಾದಿಗಳ ತಲೆ ಕಡಿತ ಹೇಳಿಕೆಗೆ ಸಂಘಟನೆಯಿಂದಲೇ ವಿರೋಧ; ಹಿಜ್ಬುಲ್ ಮುಜಾಹಿದ್ದೀನ್ ತೊರೆದ ಉಗ್ರ ಮುಸಾ!

ಇಸ್ಲಾಂ ಕುರಿತ ನಮ್ಮ ಹೋರಾಟದಲ್ಲಿ ಮಧ್ಯಪ್ರವೇಶ ಮಾಡಿದರೆ ಹುರಿಯತ್ ನಾಯಕರ ತಲೆ ಕಡಿದು ಲಾಲ್'ಚೌಕ್ ನಲ್ಲಿ ನೇತುಹಾಕುತ್ತೇವೆಂದು ಬೆದರಿಕೆ ಹಾಕಿದ್ದ ಉಗ್ರ ಝಾಕೀರ್ ಮುಸಾ ಇದೀಗ...

ಜಮ್ಮು: ಇಸ್ಲಾಂ ಕುರಿತ ನಮ್ಮ ಹೋರಾಟದಲ್ಲಿ ಮಧ್ಯಪ್ರವೇಶ ಮಾಡಿದರೆ ಹುರಿಯತ್ ನಾಯಕರ ತಲೆ ಕಡಿದು ಲಾಲ್'ಚೌಕ್ ನಲ್ಲಿ ನೇತುಹಾಕುತ್ತೇವೆಂದು ಬೆದರಿಕೆ ಹಾಕಿದ್ದ ಉಗ್ರ ಝಾಕೀರ್ ಮುಸಾ ಇದೀಗ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯನ್ನು ತೊರೆದಿದ್ದಾನೆ. 
ಸಂಘಟನೆ ತೊರೆಯುವ ಕುರಿತಂತೆ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಉಗ್ರ ಝಾಕೀರ್ ಮುಸಾ, ಹಿಜ್ಬುಲ್ ನನ್ನನ್ನು ತನ್ನ ಸಂಘಟನೆಯ ಸದಸ್ಯನೆಂದು ಪರಿಗಣಿಸದಿದ್ದ ಮೇಲೆ ನಾನೂ ಆ ಸಂಘಟನೆಯನ್ನು ಪ್ರತಿನಿಧಿಸುವುದಿಲ್ಲ ಎಂದು ಹೇಳಿಕೊಂಡಿದ್ದಾನೆ. 
ನಿನ್ನೆಯಷ್ಟೇ ಝಾಕೀರ್ ಮುಸಾ ನೀಡಿದ್ದ ಹೇಳಿಕೆಯ ಆಡಿಯೋ ಟೇಪ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕಪಟವೇಷದಾರಿ ಹುರಿಯತ್ ನಾಯಕರಿಗೆ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ. ಇಸ್ಲಾಂ ಕುರಿತಂತೆ ನಮ್ಮ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಪ್ರತ್ಯೇಕತಾವಾದಿಗಳು ಮಧ್ಯೆ ಪ್ರವೇಶ ಮಾಡಬಾರದು. ಮಾಡಿದ್ದೇ ಆದರೆ, ಅವರ ತಲೆಗಳನ್ನು ಕಡಿದು ಲಾಲ್ ಚೌಕ್ ನಲ್ಲಿ ನೇತು ಹಾಕುತ್ತೇವೆಂದು. ಕಾಶ್ಮೀರದಲ್ಲಿ ಷರಿಯತ್ ಹೇರುವುದು ನಮ್ಮ ಹೋರಾಟದ ಉದ್ದೇಶವಾಗಿದೆಯೇ ಹೊರತು ಕಾಶ್ಮೀರದ ರಾಜಕೀಯ ತಿಕ್ಕಾಟದ ಸಮಸ್ಯೆ ಬಗೆಹರಿಸುವುದಕ್ಕಾಗಿ ಅಲ್ಲ. ನಮ್ಮ ಹೋರಾಟ ಇಸ್ಲಾಂ ಹಾಗೂ ಷರಿಯತ್ ಗಾಗಿ ಎಂಬುದನ್ನು ಪ್ರತ್ಯೇಕತಾವಾದಿಗಳು ತಿಳಿಯಬೇಕಿದೆ ಎಂದು ಝಾಕೀರ್ ಮುಸಾ ಹೇಳಿದ್ದ. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಹಿಜ್ಬುಲ್ ಮುಜಾಹಿದ್ದಾನ್ ಉಗ್ರ ಸಂಘಟನೆ ವಕ್ತಾರ ಸಲೀಮ್ ಹಶ್ಮಿ, ಮುಸಾ ಹೇಳಿಕೆಗೂ ಸಂಘಟನೆಗೂ ಸಂಬಂಧವಿಲ್ಲ. ಈ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಮುಸಾ ಹೇಳಿಕೆ ವೈಯಕ್ತಿಕ ಹೇಳಿಕೆಯಾಗಿದ್ದು, ಇದಕ್ಕೂ ಸಂಘಟನೆಗೂ ಸಂಬಂಧವಿಲ್ಲ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT