ಉಗ್ರ ಝಾಕೀರ್ ಮುಸಾ 
ದೇಶ

ಪ್ರತ್ಯೇಕತಾವಾದಿಗಳ ತಲೆ ಕಡಿತ ಹೇಳಿಕೆಗೆ ಸಂಘಟನೆಯಿಂದಲೇ ವಿರೋಧ; ಹಿಜ್ಬುಲ್ ಮುಜಾಹಿದ್ದೀನ್ ತೊರೆದ ಉಗ್ರ ಮುಸಾ!

ಇಸ್ಲಾಂ ಕುರಿತ ನಮ್ಮ ಹೋರಾಟದಲ್ಲಿ ಮಧ್ಯಪ್ರವೇಶ ಮಾಡಿದರೆ ಹುರಿಯತ್ ನಾಯಕರ ತಲೆ ಕಡಿದು ಲಾಲ್'ಚೌಕ್ ನಲ್ಲಿ ನೇತುಹಾಕುತ್ತೇವೆಂದು ಬೆದರಿಕೆ ಹಾಕಿದ್ದ ಉಗ್ರ ಝಾಕೀರ್ ಮುಸಾ ಇದೀಗ...

ಜಮ್ಮು: ಇಸ್ಲಾಂ ಕುರಿತ ನಮ್ಮ ಹೋರಾಟದಲ್ಲಿ ಮಧ್ಯಪ್ರವೇಶ ಮಾಡಿದರೆ ಹುರಿಯತ್ ನಾಯಕರ ತಲೆ ಕಡಿದು ಲಾಲ್'ಚೌಕ್ ನಲ್ಲಿ ನೇತುಹಾಕುತ್ತೇವೆಂದು ಬೆದರಿಕೆ ಹಾಕಿದ್ದ ಉಗ್ರ ಝಾಕೀರ್ ಮುಸಾ ಇದೀಗ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯನ್ನು ತೊರೆದಿದ್ದಾನೆ. 
ಸಂಘಟನೆ ತೊರೆಯುವ ಕುರಿತಂತೆ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಉಗ್ರ ಝಾಕೀರ್ ಮುಸಾ, ಹಿಜ್ಬುಲ್ ನನ್ನನ್ನು ತನ್ನ ಸಂಘಟನೆಯ ಸದಸ್ಯನೆಂದು ಪರಿಗಣಿಸದಿದ್ದ ಮೇಲೆ ನಾನೂ ಆ ಸಂಘಟನೆಯನ್ನು ಪ್ರತಿನಿಧಿಸುವುದಿಲ್ಲ ಎಂದು ಹೇಳಿಕೊಂಡಿದ್ದಾನೆ. 
ನಿನ್ನೆಯಷ್ಟೇ ಝಾಕೀರ್ ಮುಸಾ ನೀಡಿದ್ದ ಹೇಳಿಕೆಯ ಆಡಿಯೋ ಟೇಪ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕಪಟವೇಷದಾರಿ ಹುರಿಯತ್ ನಾಯಕರಿಗೆ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ. ಇಸ್ಲಾಂ ಕುರಿತಂತೆ ನಮ್ಮ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಪ್ರತ್ಯೇಕತಾವಾದಿಗಳು ಮಧ್ಯೆ ಪ್ರವೇಶ ಮಾಡಬಾರದು. ಮಾಡಿದ್ದೇ ಆದರೆ, ಅವರ ತಲೆಗಳನ್ನು ಕಡಿದು ಲಾಲ್ ಚೌಕ್ ನಲ್ಲಿ ನೇತು ಹಾಕುತ್ತೇವೆಂದು. ಕಾಶ್ಮೀರದಲ್ಲಿ ಷರಿಯತ್ ಹೇರುವುದು ನಮ್ಮ ಹೋರಾಟದ ಉದ್ದೇಶವಾಗಿದೆಯೇ ಹೊರತು ಕಾಶ್ಮೀರದ ರಾಜಕೀಯ ತಿಕ್ಕಾಟದ ಸಮಸ್ಯೆ ಬಗೆಹರಿಸುವುದಕ್ಕಾಗಿ ಅಲ್ಲ. ನಮ್ಮ ಹೋರಾಟ ಇಸ್ಲಾಂ ಹಾಗೂ ಷರಿಯತ್ ಗಾಗಿ ಎಂಬುದನ್ನು ಪ್ರತ್ಯೇಕತಾವಾದಿಗಳು ತಿಳಿಯಬೇಕಿದೆ ಎಂದು ಝಾಕೀರ್ ಮುಸಾ ಹೇಳಿದ್ದ. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಹಿಜ್ಬುಲ್ ಮುಜಾಹಿದ್ದಾನ್ ಉಗ್ರ ಸಂಘಟನೆ ವಕ್ತಾರ ಸಲೀಮ್ ಹಶ್ಮಿ, ಮುಸಾ ಹೇಳಿಕೆಗೂ ಸಂಘಟನೆಗೂ ಸಂಬಂಧವಿಲ್ಲ. ಈ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಮುಸಾ ಹೇಳಿಕೆ ವೈಯಕ್ತಿಕ ಹೇಳಿಕೆಯಾಗಿದ್ದು, ಇದಕ್ಕೂ ಸಂಘಟನೆಗೂ ಸಂಬಂಧವಿಲ್ಲ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT