ಶಂಕರ್ ಸಿಂಗ್ ವಘೇಲಾ 
ದೇಶ

ರಾಹುಲ್ ಟ್ವಿಟರ್ ಖಾತೆ ಅನ್ ಫಾಲೋ ಮಾಡಿ ಪಕ್ಷದ ಸಭೆಗೆ ಗೈರಾದ ಗುಜರಾತ್ ಕೈ ನಾಯಕ ವಘೇಲಾ!

ಗುಜರಾತ್ ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ ಗುಜರಾತ್ ಕಾಂಗ್ರೆಸ್ ನಲ್ಲಿ ಭಿನ್ನಮತ ಉಂಟಾಗಿರುವ ಲಕ್ಷಣ ಕಾಣಿಸುತ್ತಿದೆ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ ಗುಜರಾತ್  ಕಾಂಗ್ರೆಸ್ ನಲ್ಲಿ ಭಿನ್ನಮತ ಉಂಟಾಗಿರುವ ಲಕ್ಷಣ ಕಾಣಿಸುತ್ತಿದೆ. ಗುಜರಾತ್ ಕಾಂಗ್ರೆಸ್ ನ ನಾಯಕರಾಗಿರುವ ಶಂಕರ್ ಸಿಂಗ್ ವಘೇಲಾ ಪಕ್ಷದ ಸಭೆಗೆ ಗೈರು ಹಾಜರಾಗಿ, ಟ್ವಿಟರ್ ನಲ್ಲಿ ರಾಹುಲ್ ಗಾಂಧಿ ಅವರನ್ನೂ ಸೇರಿ ಒಟ್ಟು 30 ನಾಯಕರನ್ನು ಅನ್ ಫಾಲೋ ಮಾಡಿದ್ದಾರೆ. 
ಶಂಕರ್ ಸಿಂಗ್ ವಘೇಲಾ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿದ್ದು, ಕಾಂಗ್ರೆಸ್ ತೊರೆಯುವ ವದಂತಿಗಳನ್ನು ನಿರಾಕರಿಸಿದ ನಂತರವೂ ಶಂಕರ್ ಸಿಂಗ್ ವಘೇಲಾ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸೋನಿಯಾ ಗಾಂಧಿ ಅವರ ರಾಜಕೀಯ ಸಲಹೆಗಾರ ಅಹ್ಮದ್ ಪಟೇಲ್ ಅವರನ್ನು  ಟ್ವಿಟರ್ ನಲ್ಲಿ ಅನ್ ಫಾಲೋ ಮಾಡಿ ಪಕ್ಷದ ಸಭೆಗೆ ಗೈರಾಗಿರುವುದು ಅಚ್ಚರಿ ಮೂಡಿಸಿದೆ.. 
ಈ ಬೆಳವಣಿಗೆ ನಂತರ ವಘೇಲಾ ಅವರನ್ನು ಸಂಪರ್ಕಿಸಲು ಮಾಧ್ಯಮಗಳು ಪ್ರಯತ್ನಿಸುತ್ತಿವೆಯಾದರೂ, ಪ್ರತಿಕ್ರಿಯೆ ನೀಡಲು ಸಿಗುತ್ತಿಲ್ಲ. ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ವಿಚಾರದಲ್ಲಿ ವಘೇಲಾ ಹಾಗೂ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಭರತ್ ಸಿಂಗ್ ಸೋಲಂಕಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT