ಗುರುದಾಸ್'ಪುರ: ಪಠಾಣ್'ಕೋಟ್ ದಾಳಿಯಲ್ಲಿ ಹುತಾತ್ಮನಾದ ಯೋಧನ ಕುಟುಂಬಸ್ಥರಿಗೆ ಥಳಿತ 
ದೇಶ

ಗುರುದಾಸ್'ಪುರ: ಪಠಾಣ್'ಕೋಟ್ ದಾಳಿಯಲ್ಲಿ ಹುತಾತ್ಮನಾದ ಯೋಧನ ಕುಟುಂಬಸ್ಥರಿಗೆ ಥಳಿತ

ಪಠಾಣ್ ಕೋಟ್ ದಾಳಿಯಲ್ಲಿ ಹುತಾತ್ಮನಾದ ಯೋಧ ಕುಲ್ವಂತ್ ಸಿಂಗ್ ಅವರ ಕುಟುಂಬಸ್ಥರಿಗೆ ನಡು ರಸ್ತೆಯಲ್ಲಿ ಥಳಿಸಿರುವ ಅಮಾನವೀಯ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ...

ಗುರುದಾಸ್'ಪುರ: ಪಠಾಣ್ ಕೋಟ್ ದಾಳಿಯಲ್ಲಿ ಹುತಾತ್ಮನಾದ ಯೋಧ ಕುಲ್ವಂತ್ ಸಿಂಗ್ ಅವರ ಕುಟುಂಬಸ್ಥರಿಗೆ ನಡು ರಸ್ತೆಯಲ್ಲಿ ಥಳಿಸಿರುವ ಅಮಾನವೀಯ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. 
ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಾವೆಲ್ ಏಜೆಂಟ್ ಹಾಗೂ ಆತನ ಸಹಚರರು ಹುತಾತ್ಮ ಯೋಧ ಕುಲ್ವಂತ್ ಸಿಂಗ್ ಅವರ ಸಹೋದರ ಹಾಗೂ ಆತನ ಪತ್ನಿಗೆ ರಸ್ತೆಯೊಂದರ ಮಧ್ಯೆ ಹೊಡೆಯುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
ಕುಲ್ವಂತ್ ಸಿಂಗ್ ಸಹೋದರ ಹರ್ದೀಪ್ ಅವರು ವಿದೇಶಕ್ಕೆ ಕಳುಹಿಸಿಕೊಡುವಂತೆ ಟ್ರಾವೆಲ್ ಏಜೆಂಟ್ ಆಗಿರುವ ಗುರ್ನಾಮ್ ಸಿಂಗ್ ಎಂಬಾತನಿಗೆ ರೂ.9 ಲಕ್ಷ ಹಣವನ್ನು ನೀಡಿದ್ದಾರೆ. ಹಣ ಪಡೆದ ಬಳಿಕ ಗುರ್ನಾಮ್ ಸಿಂಗ್ ಮೋಸ ಮಾಡಿದ್ದಾನೆ. ಹೀಗಾಗಿ ಹರ್ದೀಪ್ ಕುಟುಂಬಸ್ಥರು ಹಣವನ್ನು ಹಿಂದಕ್ಕೆ ನೀಡುವಂತೆ ಆಗ್ರಹಿಸಿದ್ದಾರೆ.
ಕುಟುಂಬಸ್ಥರ ಆಗ್ರಹದಂತೆಯೇ ಗುರ್ನಾಮ್ ರೂ.5 ಲಕ್ಷ ಹಣವನ್ನು ಹಿಂತಿರುಗಿಸಿದ್ದಾನೆ. ಉಳಿದ ಹಣವನ್ನು ಶೀಘ್ರದಲ್ಲಿಯೇ ನೀಡುತ್ತೇನೆಂದು ಪ್ರಮಾಣ ಮಾಡಿದ್ದಾನೆ. ಹಲವು ದಿನಗಳಾದರೂ ಬಾಕಿ ಹಣವನ್ನು ಗುರ್ನಾಮ್ ಸಿಂಗ್ ಹಿಂತಿರುಗಿಸಿಲ್ಲ. ಹೀಗಾಗಿ ಹರ್ದೀಪ್ ಹಾಗೂ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ. 
ಮೇ.13 ರಂದು ಪೊಲೀಸ್ ಠಾಣೆಗೆ ದೂರು ನೀಡಲು ಹರ್ದೀಪ್ ಹಾಗೂ ಅವರ ಪತ್ನಿ ಪೊಲೀಸ್ ಠಾಣೆಗೆ ಹೋಗುತ್ತಿದ್ದ ವೇಳೆ ಮೊಬೈಲ್ ರೀಚಾರ್ಜ್ ಮಾಡಿಸಲು ಅಂಗಡಿಯೊಂದಕ್ಕೆ ಹೋಗಿದ್ದಾರೆ. ಈ ವೇಳೆ ಗುರ್ನಾಮ್ ಸಿಂಗ್ ಹಾಗೂ ಆತನ ಸಹಚರರು ಅಂಗಡಿಗೆ ನುಗ್ಗಿದ್ದು, ಹರ್ದೀಪ್ ಹಾಗೂ ಆತನ ಪತ್ನಿಯನ್ನು ರಸ್ತೆಗೆ ಎಳೆದು ಥಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿದೆ. 
ಪ್ರಕರಣ ಸಂಬಂಧ ಗುರ್ನಾಮ್ ಸೇರಿದಂತೆ 11 ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT