ಲಾಲು ಪ್ರಸಾದ್ ಯಾದವ್ 
ದೇಶ

ಪ್ರಧಾನಿ ಮೋದಿ ಲೋಕಸಭೆಯನ್ನು ವಿಸರ್ಜಿಸಿ ರಾಜ್ಯಗಳೊಂದಿಗೆ ಏಕಕಾಲಕ್ಕೆ ಚುನಾವಣೆ ನಡೆಸಲಿ: ಲಾಲು

ಲೋಕಸಭೆಯನ್ನು ವಿಸರ್ಜಿಸಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯೊಂದಿಗೆ ಏಕಕಾಲಕ್ಕೆ ಲೋಕಸಭೆಯ ಚುನಾವಣೆಯನ್ನೂ ನಡೆಸಲಿ ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್...

ಪಾಟ್ನಾ: ಏಕಕಾಲಕ್ಕೆ ಲೋಕಸಭೆ-ವಿಧಾನಸಭೆ ಚುನಾವಣೆಗಳನ್ನು ನಡೆಸುವ ಮಾತನ್ನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯನ್ನು ವಿಸರ್ಜಿಸಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯೊಂದಿಗೆ ಏಕಕಾಲಕ್ಕೆ ಲೋಕಸಭೆಯ ಚುನಾವಣೆಯನ್ನೂ ನಡೆಸಲಿ ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸವಾಲು ಹಾಕಿದ್ದಾರೆ. 
ಲೋಕಸಭೆ-ವಿಧಾನಸಭೆಗಳ ಚುನಾವಣೆಯನ್ನು ಏಕಕಾಲಕ್ಕೆ ನಡೆಸುವ ಮೂಲಕ ರಾಜಕೀಯ ಸ್ಥಿರತೆ ತರುವ ನೀತಿ ಆಯೋಗದ ಪ್ರಸ್ತಾವನೆಯನ್ನು ಬಿಜೆಪಿ ನಾಯತ್ವ ಒಪ್ಪಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್, ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ವಿಸರ್ಜಿಸಲಿ, ಬಳಿಕ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳೊಂದಿಗೆ ಲೋಕಸಭೆಯ ಚುನಾವಣೆಯನ್ನೂ ನಡೆಸಲಿ ಇದರಿಂದ ಮೋದಿ ತಮ್ಮ ಸಾಮರ್ಥ್ಯ, ಜನಪ್ರಿಯತೆಯನ್ನೂ ಅರಿತುಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ. 
ಮೋದಿ ಸರ್ಕಾರ 3 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಲಾಲು ಪ್ರಸಾದ್ ಯಾದವ್, ವಿಧಾನಸಭೆ ಚುನಾವಣೆ, ಉಪಚುನಾವಣೆಗಳಲ್ಲಿ ಬಿಜೆಪಿ ಗೆದ್ದಿರುವುದು ವಿಪಕ್ಷಗಳಲ್ಲಿದ್ದ ಒಡಕಿನಿಂದ, ವಿಪಕ್ಷಗಳು ಒಗ್ಗಟ್ಟಿನಿಂದ ಇರುವ ಕಡೆ ಬಿಜೆಪಿ ಸೋತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳ ಪೈಕಿ ಯಾವುದನ್ನೂ ಕಳೆದ ಮೂರು ವರ್ಷಗಳಲ್ಲಿ ಈಡೇರಿಸಿಲ್ಲ. ಎಲ್ಲಾ ರಂಗಗಳಲ್ಲೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT