ನ್ಯಾ.ಸಿ.ಎಸ್.ಕರ್ಣನ್ 
ದೇಶ

ನ್ಯಾಯಾಂಗ ನಿಂದನೆ ಪ್ರಕರಣ: ಕರ್ಣನ್ ಮೇಲ್ಮನವಿ ತಿರಸ್ಕೃತ, ಯಾವುದೇ ಕ್ಷಣ ಅರೆಸ್ಟ್

ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿರುವ ನ್ಯಾ.ಸಿ.ಎಸ್.ಕರ್ಣನ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು...

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿರುವ ನ್ಯಾ.ಸಿ.ಎಸ್.ಕರ್ಣನ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಾದರೂ ಬಂಧನಕ್ಕೊಳಪಡಿಸುವಂತೆ ಸೋಮವಾರ ಆದೇಶ ನೀಡಿದೆ. 
ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ಕರ್ಣನ್ ಅವರು ತುರ್ತು ಪರಿಶೀಲನೆ ನಡೆಸುವಂತೆ ಪದೇ ಪದೇ ಅರ್ಜಿ ಸಲ್ಲಿಸುತ್ತಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲವಾಗಿರುವ ಸುಪ್ರೀಂಕೋರ್ಟ್, ಕರ್ಣನ್ ಸಲ್ಲಿರುವ ಅರ್ಜಿಯನ್ನು ಯಾವುದೇ ಕಾರಣಕ್ಕೂ ವಿಚಾರಣೆಗೆ ಎತ್ತಿಕೊಳ್ಳುವುದಿಲ್ಲ ಎಂದು ಹೇಳಿದೆ. 
ವಿವಾದಿತ ನ್ಯಾಯಮೂರ್ತಿ ಕರ್ಣನ್ ಅವರು ನ್ಯಾಯಾಂಗ ನಿಂದನೆ ಅಡಿಯಲ್ಲಿ 6 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಶಿಕ್ಷೆಯನ್ನು ವಜಾಗೊಳಿಸುವಂತೆ ಕರ್ಣನ್ ಅವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. 
ಕರ್ಣನ್ ಪರ ಅರ್ಜಿ ಸಲ್ಲಿಕೆ ಮಾಡಿದ ವಕೀಲ ಮ್ಯಾಥ್ಯೂ ನೆಡುಂಪರ ಅವರು ತುರ್ತು ಪರಿಶೀಲನೆ ನಡೆಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದರು. ಕರ್ಣನ್ ಅವರು ಬೇಷರತ್ ಕ್ಷಮೆಯಾಚಿಸಲು ಇಚ್ಛಿಸುತ್ತಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದರು. 
ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂ, ನ್ಯಾಯಾಲಯದ ಸಮಯವನ್ನು ಕರ್ಣನ್ ಅವರು ವ್ಯರ್ಥ ಮಾಡುತ್ತಿದ್ದು, ಸಮಯ ಬಂದಾಗಲೇ ಅರ್ಜಿಯನ್ನು ಪರಿಶೀಲನೆ ನಡೆಸುತ್ತೇವೆಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT