ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ನವದೆಹಲಿ: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪರ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ತಮ್ಮವಾದಕ್ಕೆ ಕೇವಲ ರೂ.1 ಸಂಭಾವನೆ ಪಡೆದಿದ್ದಾರೆ.
ಹರೀಶ್ ಸಾಳ್ವೆ ಸಂಭಾವನೆ ಕುರಿತಂತೆ ಸ್ವತಃ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಜಾಧವ್ ಪರ ವಾದ ಮಂಡಿಸಲು ಹರೀಶ್ ಸಾಳ್ವೆ ಅವರು ಕೇವಲ ರೂ.1 ಸಂಭಾವನೆ ಪಡೆದಿದ್ದಾರೆಂದು ಹೇಳಿದ್ದಾರೆ.
ಭಾರತದ ಯಾವುದೇ ಒಬ್ಬ ಉತ್ತಮ ವಕೀಲರು ಹರೀಶ್ ಸಾಳ್ವೆ ಅವರಿಗಿಂತಲೂ ಕಡಿಮೆ ಸಂಭಾವನೆ ಪಡೆದು ಕುಲ್'ಭೂಷಣ್ ಪರ ವಾದ ಮಂಡನೆ ಮಾಡುತ್ತಿದ್ದರು ಎಂದು ಸಂಜೀವ್ ಗೋಯಲ್ ಎಂಬ ವ್ಯಕ್ತಿಯೊಬ್ಬ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುಷ್ಮಾ ಸ್ವರಾಜ್ ಅವರು, ಅದರಲ್ಲಿ ಹರೀಶ್ ಅವರು ರೂ.1 ಸಂಭಾವನೆ ಪಡೆದಿರುವುದಾಗಿ ತಿಳಿಸಿದ್ದಾರೆ.
ಹರೀಶ್ ಸಾಳ್ಮೆ ಭಾರತದ ವಕೀಲರ ತಂಡ ಮುಖ್ಯಸ್ಥರಾಗಿದ್ದು, ಹೇಗ್ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಜಾಧವ್ ಪರ ಪರಿಣಾಮಕಾರಿಯಾಗಿ ವಾದ ಮಂಡನೆ ಮಾಡುತ್ತಿದ್ದಾರೆ.
ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ಮೆ ಅವರು ದೇಶದ ಅತ್ಯಂತ ದುಬಾರಿ ವಕೀಲರಲ್ಲಿ ಒಬ್ಬರು ಎಂದು ಗುರ್ತಿಸಿಕೊಂಡಿದ್ದಾರೆ. ಹಲವಾರು ಪ್ರತಿಷ್ಠಿತ ವ್ಯಕ್ತಿಗಳ ಪರ ವಾದ ಮಂಡನೆ ಮಾಡಿದ್ದು, ದುಬಾರಿ ಮೊತ್ತವನ್ನು ಸಂಭಾವನೆಯಾಗಿ ಪಡೆದಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಪರವಾಗಿಯೂ ಹರೀಶ್ ಸಾಳ್ಮೆ ವಾದ ಮಂಡನೆ ಮಾಡುತ್ತಿದ್ದಾರೆ. ಸಲ್ಮಾನ್ ತಮ್ಮ ವಿರುದ್ಧದ ಬಹುತೇಕ ಪ್ರಕರಣಗಳಲ್ಲಿ ಖುಲಾಸೆಗೊಳ್ಳುವಲ್ಲಿ ಹರೀಶ್ ಪರಿಣಾಮಕಾರಿಯಾದ ವಾದ ನೆರವಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos