ಕಿರಣ್ ಬೇಡಿ 
ದೇಶ

ಪೋಷಕರು ಗಂಡು ಮಕ್ಕಳ ಮೇಲೆ ಸದಾ ಒಂದು ಕಣ್ಣಿಟ್ಟಿರಬೇಕು: ಕಿರಣ್ ಬೇಡಿ

ರೊಹ್ಟಕ್ ಗ್ಯಾಂಗ್ ರೇಪ್ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವಾಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪುದುಚೆರಿ...

ನವದೆಹಲಿ:  ರೊಹ್ಟಕ್ ಗ್ಯಾಂಗ್ ರೇಪ್ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವಾಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಪೋಷಕರು ತಮ್ಮ ಗಂಡು ಮಕ್ಕಳನ್ನು ಯಾವತ್ತೂ ಗಮನಿಸುತ್ತಿರಬೇಕು ಎಂದು ಹೇಳಿದ್ದಾರೆ.
ಗಂಡು ಮಗು ಬೇಕೆಂದು ಆಸೆಪಡುವ ಪೋಷಕರು ತಮ್ಮ ಮಗ ಮುಂದೆ ದೊಡ್ಡವನಾದ ಮೇಲೆ ಯಾವ ರೀತಿ ಬೆಳೆಯಬೇಕು, ಏನಾಗಬೇಕು ಎಂಬ ಬಗ್ಗೆಯೂ ಯೋಚಿಸಬೇಕು. ಗಂಡು ಮಕ್ಕಳು ಸಮಾಜಕ್ಕೆ ಒಂದು ಆಸ್ತಿಯಾಗಿ ಬದಲಾಗಬಹುದು ಇಲ್ಲವೇ ಸಮಾಜಘಾತುಕರಾಗಿ ಕೂಡ ಬೆಳೆಯಬಹುದು ಎಂದು ಕಿರಣ್ ಬೇಡಿ ಅಭಿಪ್ರಾಯಪಟ್ಟರು.
ಪೋಷಕರು ತಮ್ಮ ಮಕ್ಕಳನ್ನು ಜವಾಬ್ದಾರಿಯುತವಾಗಿ  ಮತ್ತು ಜಾಗ್ರತೆಯಿಂದ ಪೋಷಿಸಿ ಬೆಳೆಸದಿದ್ದರೆ ಹರ್ಯಾಣ ಮಾದರಿಯ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ ಎಂದು ವಿಷಾದ ವ್ಯಕ್ತಪಡಿಸಿದರು.
ಪೋಷಕರು ಗಂಡು ಮಗು ಬೇಕೆಂದು ಬಯಸುತ್ತಾರೆ. ಆದರೆ ಎಂತಹ ಮಕ್ಕಳು? ತಮ್ಮ  ಭವಿಷ್ಯವನ್ನು ಭದ್ರಪಡಿಸಿಕೊಳ್ಳುವ ಮತ್ತು ಸಮಾಜಕ್ಕೆ ಒಂದು ಉತ್ತಮ ಸ್ವತ್ತು ಆಗಿರುವ ಮಕ್ಕಳೇ ಅಥವಾ ಸಮಾಜ ಘಾತುಕರೇ? ಮಕ್ಕಳನ್ನು ಸರಿಯಾಗಿ ಪೋಷಿಸಿದರೆ ಸಮಾಜದ ಬಗ್ಗೆ ಕಾಳಜಿ ಹೊಂದಿರುವ ವ್ಯಕ್ತಿಗಳಾಗುತ್ತಾರೆ ಎಂದರು.
 ಹೆಣ್ಣು ಮಗು ಬೇಡ, ಗಂಡು ಬೇಕೆಂದು ಆಶಿಸುವವರ ಮೇಲೆ ಕೂಡ ಕಿರಣ್ ಬೇಡಿ ಆಕ್ರೋಶ ವ್ಯಕ್ತಪಡಿಸಿದರು. ಹೆಣ್ಣು ಮಕ್ಕಳ ಮೇಲೆ ತೀವ್ರ ನಿಗಾ ಇಡಲಾಗುತ್ತದೆ. ಅವರನ್ನು ಕಟ್ಟುನಿಟ್ಟು ಶಿಸ್ತಿನಿಂದ ಬೆಳೆಸಲಾಗುತ್ತದೆ. ಆದರೆ ಗಂಡು ಮಕ್ಕಳನ್ನು ಬೇಕಾಬಿಟ್ಟಿಯಾಗಿ ಬೆಳೆಸುತ್ತಾರೆ. ಇಂತಹ ಗಂಡು ಮಕ್ಕಳು ಮುಂದೆ ಕೆಟ್ಟ ಜನರ ಸಂಪರ್ಕ ಬೆಳೆಸು ದುರ್ಬುದ್ಧಿಗಳನ್ನು ಕಲಿಯುತ್ತಾರೆ ಎಂದರು.
ದೇಶದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಭದ್ರತೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಕಿರಣ್ ಬೇಡಿ, ಬೇಟಿ ಬಚಾವೊ, ಬೇಟಿ ಪಡಾವೊ ಬದಲು ಹೊಸ ಘೋಷ ವಾಕ್ಯ ಬೇಟಿ ಬಚಾವೊ ಅಪ್ನಿ ಅಪ್ನಿ  ಎಂದು ಬದಲಾಯಿಸಬೇಕು ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT