ಸಾಂದರ್ಭಿಕ ಚಿತ್ರ 
ದೇಶ

ಸಾಮಾಜಿಕ ಮಾಧ್ಯಮವನ್ನು ಪ್ರೆಸ್ ಕೌನ್ಸಿಲ್ ಅಡಿ ತರಲು ಸರ್ಕಾರಕ್ಕೆ ಶಿಫಾರಸು

ಮಾಧ್ಯಮದ ಕಾವಲು ನಾಯಿ ಎಂದು ಕರೆಯಲ್ಪಡುವ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದಡಿ ಸಾಮಾಜಿಕ ಮಾಧ್ಯಮವನ್ನು...

ಇಂದೋರ್: ಮಾಧ್ಯಮದ ಕಾವಲು ನಾಯಿ ಎಂದು ಕರೆಯಲ್ಪಡುವ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದಡಿ ಸಾಮಾಜಿಕ ಮಾಧ್ಯಮವನ್ನು ತರಬೇಕು ಎಂದು ಅದರ ಅಧ್ಯಕ್ಷ ನ್ಯಾಯಾಧೀಶ(ನಿವೃತ್ತ) ಸಿ.ಕೆ.ಪ್ರಸಾದ್ ಹೇಳಿದ್ದಾರೆ.
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಡಿಯಲ್ಲಿ ಸಾಮಾಜಿಕ ಮಾಧ್ಯಮವನ್ನು ತರಬೇಕು. ಸಾಮಾಜಿಕ ಮಾಧ್ಯಮ ಮುದ್ರಣ ಮಾಧ್ಯಮಕ್ಕಿಂತ ಬಹಳ ಬೇಗನೆ ಜನರಿಗೆ ತಲುಪುತ್ತದೆ. ಸಾಮಾಜಿಕ ಮಾಧ್ಯಮದ ಮೂಲಕ ಯಾವ ವಿಷಯ ಬೇಕಾದರೂ ವಿಶ್ವಾದ್ಯಂತ ಸೆಕೆಂಡುಗಳಲ್ಲಿ ಜನರಿಗೆ ತಲುಪುತ್ತದೆ ಎಂದು ಅವರು ಹೇಳಿದರು.
ಮುದ್ರಣ ಮಾಧ್ಯಮದಂತೆ ಸಾಮಾಜಿಕ ಮಾಧ್ಯಮ ಕೂಡ ಅದೇ ವರ್ಣಮಾಲೆಯನ್ನು ಬಳಸುತ್ತದೆ. ಹೀಗಾಗಿ ಸಾಮಾಜಿಕ ಮಾಧ್ಯಮವನ್ನು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದಿಂದ ಹೊರಗಿಡುವ ಅಗತ್ಯವೇನಿದೆ ಎಂದು ಕೇಳಿದರು.
ಆಳವಾದ ಚರ್ಚೆಯ ನಂತರ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ವ್ಯಾಪ್ತಿ ಸಾಮಾಜಿಕ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ಸಹ ವಿಸ್ತರಣೆಯಾಗಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ. ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಬದಲಿಗೆ ಮೀಡಿಯಾ ಕೌನ್ಸಿಲ್ ಎಂದು ಇಡಬೇಕೆಂದು ಶಿಫಾರಸು ಮಾಡಿದ್ದೇವೆ ಎಂದರು.
ಮೀಡಿಯಾ ಕೌನ್ಸಿಲ್ ರಚನೆಗೆ ಸರ್ಕಾರ ಕಾನೂನನ್ನು ರಚಿಸಬೇಕು. ಇದು ಸರ್ಕಾರದ ಪರಿಗಣನೆಯ ಹಂತದಲ್ಲಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

ತುಮಕೂರು ಕ್ರೀಡಾಂಗಣದಿಂದ ಗಾಂಧಿ ಹೆಸರು ತೆರವು- ಬಿಜೆಪಿ ಆರೋಪ; ಜಿ ಪರಮೇಶ್ವರ ಪ್ರತಿಕ್ರಿಯೆ ಏನು? Video

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್‌ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

SCROLL FOR NEXT