ದೇಶ

ದೆಹಲಿ ಪೊಲೀಸರಿಗೆ ಹಿನ್ನಡೆ: ಜೆಎನ್'ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಿಬಿಐಗೆ ಹಸ್ತಾಂತರ

Manjula VN
ನವದೆಹಲಿ: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಹಸ್ತಾಂತರಿಸಲಾಗಿದೆ. 
ನಜೀಬ್ ಅಹ್ಮದ್ ನಾಪತ್ತೆ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದೆ ಎಂದು ತಿಳಿದುಬಂದಿದೆ. 
ವಿದ್ಯಾರ್ಥಿ ನಾಪತ್ತೆ ಪ್ರಕರಣ ಸಂಬಂಧದ ತನಿಖೆಯಲ್ಲಿ ದೆಹಲಿ ಪೊಲೀಸರು ವಿಳಂಬ ನೀತಿಯನ್ನು ಅನುಸರಿಸುತ್ತಿದ್ದು, ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿಗಳು ಕಂಡಬರದ ಹಿನ್ನಲೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 
ಕಳೆದ 2016 ಅಕ್ಟೋಬರ್ 14ರಂದು ಜೆಎನ್ ಯು ವಿದ್ಯಾರ್ಥಿ ನಜೀಬ್ ಹಾಗೂ ಎಬಿವಿಪಿ ಕಾರ್ಯಕರ್ತರೊಂದಿಗೆ ಜಗಳವಾಗಿತ್ತು, ಆ ಜಗಳ ಬಳಿಕ ನಜೀಬ್ ನಾಪತ್ತೆಯಾಗಿದ್ದ. ಹೀಗಾಗಿ ಆರ್ ಎಸ್ ಎಸ್ ಬೆಂಬಲದ ಎಬಿವಿಪಿ  ಸಂಘಟನೆ ಕಾರ್ಯಕರ್ತರ ಮೇಲೆ ಪೊಲೀಸರು ಅನುಮಾನದ ಆಧಾರದ ಮೇರೆಗೆ ಪ್ರಕರಣ ದಾಖಲಿಸಿದ್ದರು.
SCROLL FOR NEXT