ಸುಬ್ರಹ್ಮಣ್ಯನ್ ಸ್ವಾಮಿ 
ದೇಶ

ಚಿದಂಬರಂ ಅವರು ಸೋನಿಯಾ ಗಾಂಧಿಯವರ ಖಾಸಗಿ ಅಕ್ರಮ ಹಣ ವರ್ಗಾವಣೆಗಾರರು: ಸುಬ್ರಹ್ಮಣ್ಯನ್ ಸ್ವಾಮಿ

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ...

ನವದೆಹಲಿ: ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ, ಚಿದಂಬರಂ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಖಾಸಗಿಯಾಗಿ ಅಕ್ರಮ ಹಣ ವರ್ಗಾವಣೆ ಮಾಡುವವರು ಎಂದು ಟೀಕಿಸಿದ್ದಾರೆ.
ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ ಅವರು, ವಿದೇಶಿ ಹೂಡಿಕೆ ಪ್ರಚಾರ ಮಂಡಳಿ  ಅನುಮೋದನೆಯನ್ನು ಚಿದಂಬರಂ ತಮ್ಮ ಮಗನ ಲಾಭಕ್ಕಾಗಿ ನೀಡಿದರು ಎಂದರು.
ಚಿದಂಬರಂ ಅತ್ಯಂತ ಭ್ರಷ್ಟ ವ್ಯಕ್ತಿ. ಅವರು ಸೋನಿಯಾ ಗಾಂಧಿಗೆ ಕೂಡ ಅಕ್ರಮವಾಗಿ ಹಣ ಸಾಗಿಸುವವರು. ಅವರು ಸಚಿವರಾಗಿದ್ದಾಗ ಎಲ್ಲಾ ಕಾನೂನುಗಳನ್ನು ಮುರಿದಿದ್ದರು. ತಮ್ಮ ಮಗನಿಗೆ ಲಂಚ ಪಡೆಯಲು ಅನುಕೂಲವಾಗಲೆಂದು ಎಫ್ಐಪಿಬಿ ಅನುಮೋದನೆ ಪಡೆದರು.
ಇಂತವರಿಗೆ ಶಿಕ್ಷೆಯಾಗಬೇಕು,  ಏಕೆಂದರೆ ಭವಿಷ್ಯದಲ್ಲಿ ಸಚಿವರುಗಳು ಇಂತಹ ನೀಚ ಕೆಲಸ ಮಾಡಲು ಹಿಂಜರಿಯುತ್ತಾರೆ ಎಂದು ಹೇಳಿದರು.
ಹಣಕಾಸು ಇಲಾಖೆಯ ಕೆಲವು ಅಧಿಕಾರಿಗಳು ಚಿದಂಬರಂ ಪರವಾಗಿ ಇದ್ದಾರೆ ಎಂದು ಕೂಡ ಸುಬ್ರಹ್ಮಣ್ಯನ್ ಸ್ವಾಮಿ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT