ಚೆನ್ನೈ: ತಮಿಳುನಾಡು ಆರೋಗ್ಯ ಸಚಿವ ಸಿ. ವಿಜಯ ಭಾಸ್ಕರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪುದುಕೊಟ್ಟೈನಲ್ಲಿರುವ ಭಾಸ್ಕರ್ ಅವರ ಮನೆ ಮೇಲೆ ದಾಳಿ ಮಾಡುವ ಮುನ್ನ ಅಂದರೆ ಮೇ-3 ರಂದು ಐಟಿ ಇಲಾಖೆ ವಿಜಯ ಭಾಸ್ಕರ್ ಅವರ ಪತ್ನಿ ಅವರಿಗೆ ನೋಟೀಸ್ ನೀಡಿತ್ತು.
ಕಳೆದ ತಿಂಗಳು ಚೆನ್ನೈನ ಗ್ರೀನ್ ವೇಸ್ ರಸ್ತೆಯಲ್ಲಿರುವ ವಿಜಯಭಾಸ್ಕರ್ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು.
ವಿಜಯ್ ಭಾಸ್ಕರ್ ಅವರ ಹಾಗೂ ಅವರ ಸಂಬಂಧಿಕರಿಗೆ ಸೇರಿದ ಹಲವು ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆರ್.ಕೆ ನಗರ ಉಪ ಚುನಾವಣೆಯಲ್ಲಿ ಏಪ್ರಿಲ್ 12 ರಂದು ಹಣ ಹಂಚಿಕೆಯಲ್ಲಿ ತೊಡಗಿದ್ದರು ಎಂಬ ಆರೋಪಗಳು ಕೇಳಿ ಬಂದಿದ್ದವು.
ನಾವು ನೀಡಿದ ಸಹಕಾರವನ್ನು ದುರುಪಯೋಗ ಪಡಿಸಿಕೊಂಡು ತೆರಿಗೆ ಇಲಾಖೆ ಕಿರುಕುಳ ನೀಡುತ್ತಿದ್ದಾರೆಂದು ವಿಜಯ್ ಭಾಸ್ಕರ್ ಆರೋಪಿಸಿದ್ದಾರೆ, ಇಡೀ ರಾಜ್ಯಾದ್ಯಂತ ಐಟಿ ಇಲಾಖೆ ಸುಮಾರು 23 ಸ್ಥಳಗಳಲ್ಲಿ ದಾಳಿ ನಡೆಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos