ಅರವಿಂದ್ ಕೇಜ್ರಿವಾಲ್ 
ದೇಶ

ಟ್ಯಾಂಕರ್ ಹಗರಣ: ಎಸಿಬಿಯಿಂದ ಕೇಜ್ರಿವಾಲ್ ಖಾಸಗಿ ಕಾರ್ಯದರ್ಶಿಯ ವಿಚಾರಣೆ

400 ಕೋಟಿ ನೀರಿನ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಬುಧವಾರ...

ನವದೆಹಲಿ: 400 ಕೋಟಿ ನೀರಿನ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಖಾಸಗಿ ಕಾರ್ಯದರ್ಶಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ.
ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳು ಕಳೆದ ವಾರ ಕೇಜ್ರಿವಾಲ್ ಅವರ ಖಾಸಗಿ ಕಾರ್ಯದರ್ಶಿ ಬಿಭವ್ ಕುಮಾರ್ ಅವರಿಗೆ ಸಮನ್ಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರನ್ನು ವಿಚಾರಣೆ ನಡೆಸಲಾಗಿದೆ.
ಇಂದು ಬೆಳಗ್ಗೆ 11.30ಕ್ಕೆ ಎಸಿಬಿ ಕಚೇರಿಗೆ ಆಗಮಿಸಿದ ಬಿಭವ್ ಕುಮಾರ್ ಅವರ ವಿಚಾರಣೆ ಇನ್ನು ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಆಮ್‌ ಆದ್ಮಿ ಪಕ್ಷದ ವಿರುದ್ಧ ಸಮರ ಸಾರಿರುವ ದೆಹಲಿಯ ಪದಚ್ಯುತ ಸಚಿವ ಕಪಿಲ್‌ ಮಿಶ್ರಾ ಅವರು ಎಸಿಬಿಗೆ ದೂರು ನೀಡಿದ್ದು, ನೀರಿನ ಟ್ಯಾಂಕರ್ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಎಸಿಬಿ ಮಿಶ್ರಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT