ದೇಶ

ಶ್ರೀನಗರ: ಪಿಡಿಪಿ ನಾಯಕನ ಸಹೋದರ ಅನುಮಾನಾಸ್ಪದ ಸಾವು

Manjula VN
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆಡಳಿತಾರೂಢ ಪಕ್ಷ ಪಿಡಿಪಿ ಪಕ್ಷದ ನಾಯಕರೊಬ್ಬರ ಸಹೋದರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. 
ಹಂದ್ವಾರ ಪಿಡಿಪಿ ಅಧ್ಯಕ್ಷ ಮೊಹಮ್ಮದ್ ಶಫಿ ದಾರ್ ಅವರ ಸಹೋದರ ರೆಯಾಜ್ ಅಹ್ಮದ್ ದಾರ್ ಎಂಬುವವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಹೋಟೆಲ್ ಒಂದರಲ್ಲಿ ಶವ ಪತ್ತೆಯಾಗಿದೆ. 
ದಲ್ಗೇಟ್ ಎಂಬ ಪ್ರದೇಶದಲ್ಲಿರುವ ಹೋಟೆಲ್ ವೊಂದರಲ್ಲಿ ಶವ ಪತ್ತೆಯಾಗಿದ್ದು, ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಗಳು ತಿಳಿಸಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
SCROLL FOR NEXT