ಶಾಹಿ ಇಮಾಮ್ ಮೌಲಾನಾ ನೂರ್-ಉರ್-ರೆಹಮಾನ್ ಬರ್ಕಾತಿ 
ದೇಶ

ಶಾಹಿ ಇಮಾಮ್ ಹುದ್ದೆಯಿಂದ ಬರ್ಕಾತಿ ವಜಾ: ಕಾಂಗ್ರೆಸ್ ಬೆಂಬಲ

ದೇಶ ವಿರೋಧಿ ಹೇಳಿಕೆ ನೀಡಿದ್ದ ಕೋಲ್ಕತಾದ ಟಿಪ್ಪು ಸುಲ್ತಾನ್ ಮಸೀದಿಯ ಶಾಹಿ ಇಮಾಮ ಮೌಲಾನಾ ನೂರ್-ಉರ್-ರೆಹಮಾನ್ ಬರ್ಕಾತಿ ಅವರನ್ನು ಮಸೀದಿಯ ಆಡಳಿತ ಮಂಡಳಿ ಹುದ್ದೆಯಿಂದ ವಜಾಗೊಳಿಸಿರುವುದಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ...

ನವದೆಹಲಿ: ದೇಶ ವಿರೋಧಿ ಹೇಳಿಕೆ ನೀಡಿದ್ದ ಕೋಲ್ಕತಾದ ಟಿಪ್ಪು ಸುಲ್ತಾನ್ ಮಸೀದಿಯ ಶಾಹಿ ಇಮಾಮ್ ಮೌಲಾನಾ ನೂರ್-ಉರ್-ರೆಹಮಾನ್ ಬರ್ಕಾತಿ ಅವರನ್ನು ಮಸೀದಿಯ ಆಡಳಿತ ಮಂಡಳಿ ಹುದ್ದೆಯಿಂದ ವಜಾಗೊಳಿಸಿರುವುದಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಮೀಮ್ ಅಫ್ಜಲ್ ಅವರು, ಇಮಾಮ್ ಎಂದು ಕರೆಯಲು ಬರ್ಕಾತಿ ಅರ್ಹರಲ್ಲ. ಅವರು ನೀಡಿರುವ ಪ್ರಚೋದಿತ ಹೇಳಿಕೆಗಳನ್ನು ನೋಡಿದರೆ ಅವರನ್ನು ಇಮಾಮ್ ಎಂದು ಕರೆಯಬಾರದು. ಇಮಾಮ್ ಆಗಿದ್ದು ಅವರು ರಾಜಕೀಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಬರ್ಕಾತಿ ವಜಾ ಸರಿಯಾದ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ. 
ಕೋಲ್ಕತಾ ಟಿಪ್ಪು ಸುಲ್ತಾನ್ ಮಸೀದಿಯ ವಿವಾದಿತ ಮೌಲ್ವಿ ನೂರ್ ಉರ್ ರೆಹಮಾನ್ ಬರ್ಕಾತಿ ಅವರು ನೀಡಿದ್ದ ದೇಶ ವಿರೋಧಿ ಹೇಳಿಕೆ ಹಾಗೂ ಸ್ಥಾನಮಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂಬ ಆರೋಪದ ಮೇರೆಗೆ ನಿನ್ನೆಯಷ್ಟೇ ಮಸೀದಿಯಿಂದ ವಜಾ ಮಾಡಲಾಗಿತ್ತು. 
ಇತ್ತೀಚೆಗೆ ಬರ್ಕಾತಿಯವರು ನಿಷೇಧದ ನಡುವೆಯೂ ಕಾರಿನ ಮೇಲೆ ಕೆಂಪು ದೀಪ ಹಾಕಿ ಓಡಾಡಿದ್ದರು. ಮಸೀದಿ ಹೊರಗೆ ಜೈಶ್ರೀರಾಂ ಎನ್ನುವವರು ಹಿಜಡಾಗಳು, ಬಿಜೆಪಿ ಸೇರುವ ಮುಸ್ಲಿಮರನ್ನು ಥಳಿಸುವೆ ಎಂದು ಹೇಳಿದ್ದರು. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆಯೂ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದರು. ಆದರೆ, ನನ್ನನ್ನು ವಜಾಗೊಳಿಸಿರುವ ಕ್ರಮ ಕಾನೂನುಬದ್ಧವಲ್ಲ. ನಾನು ಹುದ್ದೆ ಬಿಡಲ್ಲ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT