ಬಾಬ್ರಿ ಮಸೀದಿ 
ದೇಶ

ಬಾಬ್ರಿ ಧ್ವಂಸ ಪ್ರಕರಣ: ಐವರು ಆರೋಪಿಗಳು ಕೋರ್ಟ್ ಗೆ ಶರಣು, ಬಳಿಕ ಜಾಮೀನು

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಶನಿವಾರ.....

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಐವರು ಆರೋಪಿಗಳು ಕೋರ್ಟ್ ಮುಂದೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ.
ಆರೋಪಿಗಳಾದ ರಾಮ್ ವಿಲಾಸ್ ವೇದಾಂತಿ, ಚಂಪತ್ ರೈ ಬನ್ಸಾಲ್, ಮಹಾಂತ್ ನೃತ್ಯ ಗೋಪಾಲ್ ದಾಸ್, ಮಹಂತ್ ಧರ್ಮ ದಾಸ್ ಹಾಗೂ ಬಿಎಲ್ ಶರ್ಮಾ ಅವರು ಇಂದು ಕೋರ್ಟ್ ಗೆ ಶರಣಾಗಿದ್ದಾರೆ. 
ಮತ್ತೊಬ್ಬ ಆರೋಪಿ ಸತೀಶ್ ಪ್ರಧಾನ್ ಸೇರಿದಂತೆ ಆರು ಆರೋಪಿಗಳಿಗೆ ಮೇ 20ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಐವರು ಹಾಜರಾಗಿದ್ದಾರೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಧಾನ್ ಕೋರ್ಟ್ ಹಾಜರಾಗಿಲ್ಲ.
ವಿಚಾರಣೆ ಬಳಿಕ ಐವರು ಆರೋಪಿಗಳಿಗೆ ತಲಾ 20,000 ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಸಿಬಿಐ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT