ವಾಯುಪಡೆ ಸಿಬ್ಬಂದಿಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ 
ದೇಶ

ಯಾವುದೇ ಪರಿಸ್ಥಿತಿಗೂ ಸಿದ್ಧರಾಗಿರಿ: ವಾಯುಪಡೆ ಅಧಿಕಾರಿಗಳಿಗೆ ಬಿ.ಎಸ್. ಧನೋವಾ ಸೂಚನೆ

ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಅತ್ಯಂತ ಶೀಘ್ರವಾಗಿ ಕಾರ್ಯಾಚರಣೆಗೆ ಸಿದ್ಧರಾಗಬೇಕೆಂದು ವಾಯುಪಡೆ ಸಿಬ್ಬಂದಿಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ಅವರು ಭಾರತೀಯ ವಾಯುಪಡೆ...

ನವದೆಹಲಿ: ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಅತ್ಯಂತ ಶೀಘ್ರವಾಗಿ ಕಾರ್ಯಾಚರಣೆಗೆ ಸಿದ್ಧರಾಗಬೇಕೆಂದು ವಾಯುಪಡೆ ಸಿಬ್ಬಂದಿಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ಅವರು ಭಾರತೀಯ ವಾಯುಪಡೆಯ (ಐಎಎಫ್) ಪ್ರತಿಯೊಬ್ಬ ಅಧಿಕಾರಿಗಳಿಗೂ ವೈಯಕ್ತಿಕ ಪತ್ರದ ಮೂಲಕ ಸೂಚನೆ ನೀಡಿದ್ದಾರೆಂದು ಶನಿವಾರ ತಿಳಿದುಬಂದಿದೆ. 

ಪ್ರಸ್ತುತ ಇರುವ ಪರಿಸ್ಥಿತಿಯನ್ನು ಗಮನಿಸಿದರೆ, ಸುಧೀರ್ಘವಾಗಿ ಸಾಂಪ್ರದಾಯಿಕ ಬಾಹ್ಯ ಬೆದರಿಕೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ಯಾವುದೇ ಸಮಯದಲ್ಲೂ ಬೇಕಾದರೂ ಕಾರ್ಯಾಚರಣೆ ನಡೆಸಬೇಕಾದ ಅಗತ್ಯತೆ ಎದುರಾಗಬಹುದು. ಹೀಗಾಗಿ ವಾಯುಪಡೆ ಸದಾಕಾಲ ಸನ್ನದ್ಧರಾಗಿರಬೇಕೆಂದು ದನೋವಾ ಅವರು ಪತ್ರದಲ್ಲಿ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ. 

ಸಾಂಪ್ರದಾಯಿಕ ಬಾಹ್ಯ ಬೆದರಿಕೆಗಳ ಮೂಲಕ ಪಾಕಿಸ್ತಾನ ಯುದ್ಧಕ್ಕೆ ತಯಾರಾಗುತ್ತಿದೆ. ಇದರ ಪರಿಣಾಮದಿಂದಾಗಿಯೇ ಸೇನಾ ನೆಲೆಗಳ ಮೇಲೆ ಉಗ್ರರ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಹಿಂಸಾಚಾರ ಹೆಚ್ಚಾಗತೊಡಗಿದೆ. ಉಪಖಂಡದಲ್ಲಿ ಸಾಂಪ್ರದಾಯಿಕ ಬೆದರಿಕೆ ಬರುತ್ತಿರುವ ಹಿನ್ನಲೆಯಲ್ಲಿ ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಸಜ್ಜಾಗಿರಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಗಮನ ಹರಿಸಲು ತರಬೇತಿಯ ಅಗತ್ಯವೂ ಇದೆ ಎಂದು ವಾಯಪಡೆ ಮುಖ್ಯಸ್ಥರು ಪತ್ರದಲ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

News wrap 24-02-2026 | 2.7 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ; ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Shivamogga: 16 ವರ್ಷದ ಬಾಲಕನ ಕೊಲೆ; ರಣ್ವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ

SCROLL FOR NEXT