ಓಂ ಸ್ವಾಮಿ 
ದೇಶ

ಮಾಜಿ ಬಿಗ್ ಬಾಸ್ ಸ್ಪರ್ಧಿ ಓಂ ಸ್ವಾಮಿಗೆ ಸಾರ್ವಜನಿಕರಿಂದ ಧರ್ಮದೇಟು!

ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿ ಕೊಡುವ ಹಿಂದಿಯ ಬಿಗ್ ಬಾಸ್ 10ರ ಸ್ಪರ್ಧಿಯಾಗಿದ್ದ ವಿವಾದಿತ ಓಂ ಸ್ವಾಮಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ...

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿ ಕೊಡುವ ಹಿಂದಿಯ ಬಿಗ್ ಬಾಸ್ 10ರ ಸ್ಪರ್ಧಿಯಾಗಿದ್ದ ವಿವಾದಿತ ಓಂ ಸ್ವಾಮಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.
ದೆಹಲಿಯ ವಿಕಾಸ್ ನಗರದಲ್ಲಿ ನಾಥುರಾಮ್ ಗೋಡ್ಸೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಓಂ ಸ್ವಾಮಿಯನ್ನು ಕರೆಸಲಾಗಿತ್ತು. ಇವರನ್ನು ಕಂಡ ಮಹಿಳೆಯ ಆತನನ್ನು ಕಾರ್ಯಕ್ರಮದಿಂದ ಹೊರಹಾಕುವಂತೆ ಕೂಗಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಂದ ಓಂ ಸ್ವಾಮಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ತನ್ನನ್ನು ಯಾಕೆ ಹೊಡೆಯುತ್ತಿದ್ದಾರೆ ಎಂಬುದು ಅರಿವಾಗದೆ ಓಂ ಸ್ವಾಮಿ ಕಕ್ಕಾಬಿಕ್ಕಿಯಾಗಿದ್ದು ಸ್ಥಳದಿಂದ ಕಾಲು ಕಿತ್ತಿದ್ದಾರೆ. ಇನ್ನು ಓಂ ಸ್ವಾಮಿ ಈ ಹಿಂದೆ ಟಿವಿ ಶೋವೊಂದರಲ್ಲಿ ಮಹಿಳೆಯೊಬ್ಬರೊಂದಿಗೆ ಕೈ ಕೈ ಮಿಲಾಯಿಸಿದ್ದರು. 
ಇತ್ತೀಚೆಗಷ್ಟೇ ಯೋಗ ಕಲಿಸುವುದಾಗಿ ಯುವತಿಯನ್ನು ಕರೆಯಿಸಿ ಆಕೆಗೆ ಅರೆ ನಗ್ನ ಯೋಗ, ಧ್ಯಾನ ಎಂದೆಲ್ಲ ವಿಡಿಯೋ ಮಾಡಿ ಇಂಟರ್ ನೆಟ್ ಗೆ ಬಿಟ್ಟಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT