ಮಧ್ಯ ಪ್ರದೇಶದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್, ಎರಡನೇ ಚಿತ್ರದಲ್ಲಿ ಮುಂಬೈಯಲ್ಲಿ ಬಸ್ ಮಗುಚಿ ಸಂಭವಿಸಿದ ಅಪಘಾತ 
ದೇಶ

ಮಧ್ಯ ಪ್ರದೇಶ: ಕಂದಕಕ್ಕೆ ಉರುಳಿ ಬಿದ್ದ ಬಸ್, 6 ಯಾತ್ರಿಕರು ಸಾವು, 28 ಮಂದಿಗೆ ಗಾಯ

ಮಧ್ಯ ಪ್ರದೇಶದ ದಿಂಡೊರಿ ಜಿಲ್ಲೆಯಲ್ಲಿ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಮಗುಚಿ ಬಿದ್ದು 6 ಮಂದಿ...

ಜಬಲ್ಪುರ್(ಮಧ್ಯ ಪ್ರದೇಶ): ಮಧ್ಯ ಪ್ರದೇಶದ ದಿಂಡೊರಿ ಜಿಲ್ಲೆಯಲ್ಲಿ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಮಗುಚಿ ಬಿದ್ದು 6 ಮಂದಿ ಯಾತ್ರಿಕರು ಮೃತಪಟ್ಟು 28 ಮಂದಿ ಗಾಯಗೊಂಡ ಘಟನೆ ನಿನ್ನೆ ನಡೆದಿದೆ.
ಕಳೆದ ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಸುಮಾರು 40 ಮಂದಿ ಯಾತ್ರಿಕರು ಜಬಲ್ಪುರದಿಂದ ಅಮರ್ಕಂಟಕ್ ಗೆ ತೆರಳುತ್ತಿದ್ದರು. ಜೊಗಿ ತಿಕಾರಿಯಾ ಗ್ರಾಮದ ಹತ್ತಿರ ಘಾಟ್ ಸೆಕ್ಷನ್ ನಲ್ಲಿ ಬಸ್ಸನ್ನು ಚಲಾಯಿಸುತ್ತಿದ್ದ ಚಾಲಕ ಮಂಪರು ಬಂದಂತಾಗಿ ನಿಯಂತ್ರಣ ಕಳೆದುಕೊಂಡಾಗ ಕಂದಕಕ್ಕೆ ಬಿದ್ದಿದೆ.
ವರದಿ ಪ್ರಕಾರ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟರು. ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡವರಲ್ಲಿ 7 ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಮಧ್ಯೆ, ಕೇಂದ್ರ ಸಚಿವ ಓಂ ಪ್ರಕಾಶ್ ದುರ್ವೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟವರ ಕುಟುಂಬದವರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇನ್ನೊಂದೆಡೆ ಮುಂಬೈಯ ದಾದರ್ ಪ್ರದೇಶದಲ್ಲಿ ಬಸ್ ಮಗುಚಿ ಬಿದ್ದು ಓರ್ವ ಮೃತಪಟ್ಟು, 34 ಮಂದಿ ಗಾಯಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

ಟಿ20 ವಿಶ್ವಕಪ್ ನಲ್ಲಿ ವಿವಾದಾತ್ಮಕ ನಿರ್ಧಾರ: ಸೂರ್ಯ ಕುಮಾರ್ ಯಾದವ್ ಕ್ಷಮೆಯಾಚನೆ!

ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಪತನ; 92.36ಕ್ಕೆ ಕುಸಿತ

ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು: ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಬಂದ ಮೊದಲ ತೈಲ ಹಡಗು!

SCROLL FOR NEXT