ಕೇಂದ್ರ ಸಚಿವ ಅರುಣ್ ಜೇಟ್ಲಿ 
ದೇಶ

ನೌಗಮ್ ಕಾರ್ಯಾಚರಣೆ: ಭಾರತೀಯ ಸೇನೆಯನ್ನು ಕೊಂಡಾಡಿದ ಅರುಣ್ ಜೇಟ್ಲಿ

ಜಮ್ಮು-ಕಾಶ್ಮೀರದ ನೌಗಮ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಉಗ್ರಗಾಮಿಗಳ...

ನವದೆಹಲಿ: ಜಮ್ಮು-ಕಾಶ್ಮೀರದ ನೌಗಮ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಉಗ್ರಗಾಮಿಗಳ ಒಳನುಸುಳುವಿಕೆಯನ್ನು ಯಶಸ್ವಿಯಾಗಿ ನಾಶಪಡಿಸಿದ ಭಾರತೀಯ ಸೇನಾಪಡೆಯ ಕಾರ್ಯವನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಶ್ಲಾಘಿಸಿದ್ದಾರೆ.
ಯೋಧರ ಕಾರ್ಯದ ಬಗ್ಗೆ ದೇಶ ಹೆಮ್ಮೆ ಪಡುತ್ತದೆ ಎಂದು ಜೇಟ್ಲಿ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಮೂವರು ಸೈನಿಕರಿಗೆ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 
ಕಳೆದ ಶನಿವಾರ ಆರಂಭಗೊಂಡ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಸತತ 24 ಗಂಟೆಗಳ ಕಾಲ ಮುಂದುವರಿದಿತ್ತು. ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ವಾತಾವರಣ ನೆಲೆಸಿರುವಾಗಲೇ ಈ ಎನ್ ಕೌಂಟರ್ ನಡೆದಿದೆ. 
ಗಡಿ ನಿಯಂತ್ರಣ ರೇಖೆ ಬಳಿಯಲ್ಲಿನ ಭಯೋತ್ಪಾದಕ ಚಟುವಟಿಕೆ ಭಾರತ ಮತ್ತು ಅದರ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ನಡೆಸಲಾಗುತ್ತಿದೆ. ಭಯೋತ್ಪಾದನೆ ಮತ್ತು ಉಗ್ರಗಾಮಿತ್ವ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಮತ್ತು ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕದಡಲು ನಡೆಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT