ಕೇಂದ್ರ ಸಚಿವ ಅರುಣ್ ಜೇಟ್ಲಿ 
ದೇಶ

ನೌಗಮ್ ಕಾರ್ಯಾಚರಣೆ: ಭಾರತೀಯ ಸೇನೆಯನ್ನು ಕೊಂಡಾಡಿದ ಅರುಣ್ ಜೇಟ್ಲಿ

ಜಮ್ಮು-ಕಾಶ್ಮೀರದ ನೌಗಮ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಉಗ್ರಗಾಮಿಗಳ...

ನವದೆಹಲಿ: ಜಮ್ಮು-ಕಾಶ್ಮೀರದ ನೌಗಮ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಉಗ್ರಗಾಮಿಗಳ ಒಳನುಸುಳುವಿಕೆಯನ್ನು ಯಶಸ್ವಿಯಾಗಿ ನಾಶಪಡಿಸಿದ ಭಾರತೀಯ ಸೇನಾಪಡೆಯ ಕಾರ್ಯವನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಶ್ಲಾಘಿಸಿದ್ದಾರೆ.
ಯೋಧರ ಕಾರ್ಯದ ಬಗ್ಗೆ ದೇಶ ಹೆಮ್ಮೆ ಪಡುತ್ತದೆ ಎಂದು ಜೇಟ್ಲಿ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಮೂವರು ಸೈನಿಕರಿಗೆ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 
ಕಳೆದ ಶನಿವಾರ ಆರಂಭಗೊಂಡ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಸತತ 24 ಗಂಟೆಗಳ ಕಾಲ ಮುಂದುವರಿದಿತ್ತು. ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ವಾತಾವರಣ ನೆಲೆಸಿರುವಾಗಲೇ ಈ ಎನ್ ಕೌಂಟರ್ ನಡೆದಿದೆ. 
ಗಡಿ ನಿಯಂತ್ರಣ ರೇಖೆ ಬಳಿಯಲ್ಲಿನ ಭಯೋತ್ಪಾದಕ ಚಟುವಟಿಕೆ ಭಾರತ ಮತ್ತು ಅದರ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ನಡೆಸಲಾಗುತ್ತಿದೆ. ಭಯೋತ್ಪಾದನೆ ಮತ್ತು ಉಗ್ರಗಾಮಿತ್ವ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಮತ್ತು ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕದಡಲು ನಡೆಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಭವಿಷ್ಯದ ಬಾಹ್ಯಾಕಾಶ ಯಾನಕ್ಕೆ ಅಂತರರಾಷ್ಟ್ರೀಯ ಸಹಕಾರ ಮುಖ್ಯ: ಸುನಿತಾ ವಿಲಿಯಮ್ಸ್

KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video

ಮಾಯಾವತಿ 3ನೇ ಬಾರಿ ಯೂ-ಟರ್ನ್: ಸೋದರಳಿಯ ಆಕಾಶ್ ಆನಂದ್ ಗೆ ಮತ್ತೆ ಅವಕಾಶ; ಆದ್ರೆ ಮಾವನಿಗೆ ಷರತ್ತು ಅನ್ವಯ!

ಖ್ಯಾತ ಪಂಜಾಬಿ ಗಾಯಕನ ಮೇಲೆ ಗುಂಡಿನ ದಾಳಿ; ಜಸ್ಟ್ ಮಿಸ್, ಪ್ರಾಣಾಪಾಯದಿಂದ ಪಾರು!